ಎಲ್ಲರಿಗೂ ಒಂದೇ ರೀತಿ ಕಾನೂನು ಬೇಕು : ರೂಬಿನ್ ಮೊಸಸ್
1 min readಚಿಕ್ಕಮಗಳೂರು : ರಾಜ್ಯದಲ್ಲಿ ಮತೀಯ ಶಕ್ತಿಗಳನ್ನು ರಾಜ್ಯ ಸರ್ಕಾರವೇ ಪ್ರೋತ್ಸಾಹಿಸಿದಂತೆ ತೋರುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ರೂಬಿನ್ ಮೊಸಸ್ ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಲೆಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುತ್ತೇವೆ ಎನ್ನುವ ಶಿಕ್ಷಣ ಸಚಿವ ನಾಗೇಶ್ ರವರಿಗೆ ಸಂವಿಧಾನ ಪರಿವೆಯೇ ಇಲ್ಲದಂತೆ ತೋರುತ್ತದೆ. ಶಾಲಾ ಕಾಲೇಜುಗಳಲ್ಲಿ ಯಾವುದೇ ಧರ್ಮದ ಆಚರಣೆಗಳನ್ನು ನಡೆಸುವಂತಿಲ್ಲ ಎಂದಿದ್ದರು, ಶಿಕ್ಷಣ ಸಚಿವ ನಾಗೇಶ್ ಶಾಲಾ ಕಾಲೇಜುಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಮುಂದಾಗಿರುವುದು ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಕೂಡಲೇ ಎಲ್ಲ ಧರ್ಮದವರಿಗೂ ಒಂದೇ ರೀತಿ ಕಾನೂನ ತರಬೇಕು. ತಪ್ಪಿದ್ದಲ್ಲಿ ಹೋರಾಟ ನಡೆಸಲಾಗುವುದೆಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g