May 14, 2024

MALNAD TV

HEART OF COFFEE CITY

ಮೌಲ್ಯಧಾರಿತ ರಾಜಕಾರಣ ಬೇಕೊ ಅಥವಾ ಸಿಡಿ ಆಧಾರಿತ ರಾಜಕಾರಣ ಬೇಕೋ ಎಲ್ಲರೂ ಯೋಚಿಸಬೇಕು

1 min read

ಚಿಕ್ಕಮಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿಕೆಶಿ ತನ್ನ ಹೆಸರನ್ನ ಯಾಕೆ ತಳುಕು ಹಾಕಿಕೊಳ್ಳುತ್ತಿದ್ದಾರೆ ಎಂದು ಗೊತ್ತಾಗ್ತಿಲ್ಲ ಎಂದು ಸಿ ಟಿ ರವಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಸಂಪೂರ್ಣ ತನಿಖೆಯಾಗಲಿ ಪ್ರೊಡ್ಯೂಸರ್, ಡೈರಕ್ಟರ್, ಆ್ಯಕ್ಟರ್ ಯಾರೆಂದು ಗೊತ್ತಾಗುತ್ತೆ ಎಂದಿರುವ ಅವರು ಸಿಡಿ ಕೇಸ್ ಕರ್ನಾಟಕ ರಾಜಕಾರಣಕ್ಕೆ ಗೌರವ ತರುವ ವಿಷಯವಲ್ಲ ಎಂದರು. ಹಿಂದೆ ಮೌಲ್ಯಧಾರಿತ ರಾಜಕೀಯದ ಚರ್ಚೆ ನಡೆಯುತ್ತಿತ್ತು ಆದರೆ
ಈಗ ಸಿಡಿ ಆಧಾರಿತ ರಾಜಕೀಯದ ಚರ್ಚೆ ನಡೆಯುತ್ತಿದ್ದು, ಮೌಲ್ಯಧಾರಿತವೋ… ಸಿಡಿ ಆಧಾರಿತ ರಾಜಕಾರಣ ಬೇಕೋ, ಎಲ್ಲರೂ ಯೋಚಿಸಬೇಕು. ಸಾರ್ವಜನಿಕ ಜೀವನದಲ್ಲಿರುವ ನಾವು ಪರಿಶುದ್ಧ ರಾಜಕಾರಣದ ಬಗ್ಗೆ ಆಲೋಚಿಸಬೇಕು. ರಾಜಕಾರಣಿಗಳಿಗೆ ಜನಲಜ್ಜೆ-ಮನಲಜ್ಜೆ ಎರಡೂ ಇರಬೇಕು. ನಮಗೆ ನಾವೇ ಪರಿಮಿತಿ ಹಾಕಿಕೊಳ್ಳೋದು ಮನಲಜ್ಜೆ, ಜನರಿಗೆ ಹೆದರೋದು ಜನಲಜ್ಜೆ ಎಂದು ಚಿಕ್ಕಮಗಳೂರಿನ ಐಡಿಎಸ್ ಜಿ ಹೆಲಿಪ್ಯಾಡ್ ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!