ಸರ್ಕಾರಿ ಇಲಾಖೆಗಳಿಗೆ ಬೀಳಲಿದೆಯಾ ಬೀಗ!
1 min readಚಿಕ್ಕಮಗಳೂರು : ಸರ್ಕಾರಿ ನೌಕರರುಗಳ ವೇತನ ಭತ್ಯೆ ಪರಿಷ್ಕರಣೆ ಮತ್ತು ಎನ್.ಪಿ.ಎಸ್ ರದ್ಧತಿ ಮಾಡುವಂತೆ ಆಗ್ರಹಿಸಿ ಮಾರ್ಚ್ 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ತಿರ್ಮಾನಿಸಿದ್ದೇವೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೆಂದ್ರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ಫೇಬ್ರವರಿ 21 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಕಾರ್ಯಕಾರಿಣಿ ಸಭೆಯಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು ಮತ್ತು ನೌಕರರು ಹಾಗೂ ಎಲ್ಲಾ ವೃಂದಾ ಸಂಘದ ಅಧ್ಯಕ್ಷರು ಸೇರಿ ಮುಷ್ಕರ ಮಾಡಲು ತೀರ್ಮಾನಿಸಿ ಸರ್ಕಾರಕ್ಕೆ ಮನವಿಯನ್ನು ನೀಡಿದ್ದೇವೆ. ಅದರಂತೆ ಮಾರ್ಚ್ 1 ರಿಂದ ವೇತನ ಭತ್ಯೆ ಪರಿಷ್ಕರಣೆ ಮತ್ತು ಎನ್.ಪಿ.ಎಸ್. ರದ್ಧತಿಯ ಬಗ್ಗೆ ಅನಿರ್ಧಿಷ್ಠಾವಧಿ ಮುಷ್ಕರ ಮಾಡಲು ತೀರ್ಮಾನಿಸಿದೆ. ಜಿಲ್ಲೆಯಲ್ಲಿ ತುರ್ತು ಆರೋಗ್ಯ ಸೇವೆಯನ್ನು ಹೊರತುಪಡಿಸಿ ಶಾಲಾ ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಇಲಾಖೆಗಳನ್ನು ಬಂದ್ ಮಾಡುತ್ತೇವೆ. ನಾವು ಕೂಡ ಮುಷ್ಕರಕ್ಕೆ ಮುನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದೇವೆ. ಅತಿವೃಷ್ಠಿ ಮತ್ತು ಅನಾವೃಷ್ಠಿ ಸೇರಿದಂತೆ ಅನೇಕ ಸಂದರ್ಭದಲ್ಲಿ ಸಾವಿರ ಕೋಟಿಗೂ ಹೆಚ್ಚು ಹಣವನ್ನು ದೇಣಿಗೆ ನೀಡಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಸಾರ್ವಜನಿಕರ ಸೇವೆ ಮಾಡಿದ್ದೇವೆ. ಕೋವಿಡ್ ಸಂದರ್ಭದಲ್ಲಿ 18 ತಿಂಗಳ 4 ಸಾವಿರ ಕೋಟಿ ರೂಪಾಯಿಗಳ 3 ಡಿ.ಎ ಗಳನ್ನು ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದೇವೆ. ಸಿ.ಎಂ ಮನವಿ ಮೇರೆಗೆ 40 ಕೋಟಿ ರೂಪಾಯಿಗಳನ್ನು ಪುಣ್ಯಕೋಟಿ ಯೋಜನೆಗೆ ದೇಣಿಗೆ ನೀಡಿದ್ದೇವೆ. ಇಷ್ಟೇಲ್ಲಾ ಸರ್ಕಾರಕ್ಕೆ ದೇಣಿಗೆ ನೀಡಿದ ಇತಿಹಾಸ ಇರುವ ಸರ್ಕಾರಿ ನೌಕರರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ನೌಕರರುಗಳ ವೇತನ ಭತ್ಯೆ ಪರಿಷ್ಕರಣೆ ಮತ್ತು ಎನ್.ಪಿ.ಎಸ್ ರದ್ಧತಿ ಮಾಡುವಂತೆ ಆಗ್ರಹಿಸಿ ಮಾರ್ಚ್ 1 ರಿಂದ ತುರ್ತು ಆರೋಗ್ಯ ಸೇವೆಗಳನ್ನು ಹೊರತು ಪಡಿಸಿ ಶಾಲಾ ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಇಲಾಖೆಗಳನ್ನು ಬಂದ್ ಮಾಡುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ತಿರ್ಮಾನಿಸಿದ್ದು, ಸರ್ಕಾರಿ ನೌಕರರು ಸೇವೆಗೆ ಹಾಜರಾಗದೆ ಗೈರು ಹಾಜರಾಗುವ ಮೂಲಕ ಮುಷ್ಕರವನ್ನು ಬೆಂಬಲಿಸಬೇಕೆಂದು ಕೋರಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g