ನಕಲಿ ಪೋಸ್ಟ್ ಹರೀಶ್ ಬಂಧನ
1 min readಚಿಕ್ಕಮಗಳೂರು : ಶಾಸಕ ಸಿ.ಟಿ. ರವಿಯವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ ಮಾಡಿದ ಆರೋಪಿಯನ್ನ ಬಸವನಹಳ್ಳಿ ಠಾಣಾ ಪೊಲೀಸರು ಪತ್ತೆ ಹಚ್ಚಿ, ಬಂಧಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ರಾಜಕೀಯ ಲಾಭಕ್ಕಾಗಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ , ಲಿಂಗಾಯತ ಸಮುದಾಯಕ್ಕೆ ಪ್ರಾಮುಖ್ಯತೆ ನೀಡಬೇಕಿಲ್ಲ ಎಂದು ಹೇಳಿದ್ದಾರೆ ಎಂದು ಪೋಸ್ಟ್ ವೈರಲ್ ವಿಚಾರವು ಸಿ.ಟಿ.ರವಿ ವಿರುದ್ಧ ರಾಜ್ಯಾದ್ಯಂತ ಲಿಂಗಾಯತ ಸಮುದಾಯದ ಆಕ್ರೋಶ ವ್ಯಕ್ತವಾಗುವಂತೆ ಮಾಡಿತ್ತು.ಲಿಂಗಾಯಿತ ಸಮುದಾಯದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರು. ಈ ಮೂಲಕ ಶಾಸಕರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಯ ಬಗ್ಗೆ ಜಾಗೃತರಾದ ಬಿಜೆಪಿ ಮುಖಂಡರು ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ನೇತೃತ್ವದಲ್ಲಿ ಸುಳ್ಳು ಸುದ್ದಿ ಹರಡುತ್ತಿರುವವರ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ತನಿಖೆ ನಡೆಸುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. ಸುಳ್ಳು ಸುದ್ದಿ ಹರಡುತ್ತಿವವರ ಬಗ್ಗೆ ತನಿಖೆ ಚುರುಕುಗೊಳಿಸಿದ ಪೊಲೀಸರು, ಸಾಮಾಜಿಕ ಜಾಲತಾಣದ ಜಾಡು ಹಿಡಿದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಕಾಂಗ್ರೆಸ್ ಪಕ್ಷದ ಐ.ಟಿ. ಸೆಲ್ ನ ಕೆಂಗೆಳಹಳ್ಳಿ ಹರೀಶ್ ನನ್ನು ಬಂಧಿಸಿದ್ದಾರೆ. ಈತನು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೆಂಗೆಹಳ್ಳಿ ನಿವಾಸಿಯಾಗಿದ್ದು, ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಐ.ಟಿ ಸೆಲ್ ನ ಕಾರ್ಯಕರ್ತನಾಗಿ ಸವೆ ಸಲ್ಲಿಸುತ್ತಿದ್ದನು. ಹರೀಶ್ ನ ಬಂದನದ ಸುದ್ದಿ ತಿಳಿದ ಕೂಡಲೇ ನಗರಸಭಾಧ್ಯಕ್ಷ ವರಸಿದ್ದದಿ ವೇಣುಗೋಪಾಲ್ ಹಾಗೂ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ನೇತೃತ್ವದಲ್ಲಿ ಬಸವನಹಳ್ಳಿ ಪೊಲೀಸ್ ಠಾಣೆ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಹರೀಶ್ ಹಾಗೂ ಕಾಂಗ್ರೆಸ್ ವಿರುದ್ದ ಧಿಕಾರ ಕೂಗಿದರು. ಪೊಲೀಸರ ಹಾಗು ಕಾರ್ಯಕರ್ತರ ಮಧ್ಯೆ ವಾಕ್ಸಮರ ನಡೆದು ತಳ್ಳಾಟವು ನಡೆಯುವ ಹಂತಕ್ಕೆ ನಡೆಯಿತು. ಪೊಲೀಸ್ ಠಾಣೆಯ ಮುಂದೆ ಆರೋಪೊ ಹರೀಶ್ ಶಾಸಕ ಸಿ.ಟಿ. ರವಿಯವರ ಬಹಿರಂಗ ಕ್ಷಮೆಯಾಚಿಸಿದನು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g