ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿರುವ ಕೃಷಿಕ ಎನ್.ಎಸ್.ಚಂದ್ರಶೇಖರ ಅವರನ್ನು ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು
1 min readಈ ಬಾರಿಯ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿರುವ ಮೂಗ್ತಿಹಳ್ಳಿಯ ಪ್ರಗತಿಪರ ಕೃಷಿಕ ಎನ್.ಎಸ್.ಚಂದ್ರಶೇಖರ ನಾರಣಾಪುರ ಅವರನ್ನು ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಲ್ಮರುಡಪ್ಪ ಮಾತನಾಡಿ, ಚಂದ್ರಶೇಖರ ನಾರಣಾಪುರ ಅವರಿಗೆ ರಾಜ್ಯ ಪ್ರಶಸ್ತಿ ದೊರಕಿರುವುದು ನಮ್ಮ ಜಿಲ್ಲೆಗೆ ಹೆಮ್ಮೆ ತಂದಿದೆ. ಅದರಲ್ಲೂ ಇತ್ತೀಚೆಗೆ ತಾತ್ಸಾರಕ್ಕೊಳಗಾಗುತ್ತಿರುವ ಕೃಷಿ ಕ್ಷೇತ್ರದಿಂದ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನೀಯ ಎಂದರು.
ಕೃಷಿಯಿAದ ಆದಾಯವನ್ನೂ ಗಳಿಸಬಹುದು. ಜನರಿಂದ ಮಾನ್ಯತೆಯನ್ನೂ ಪಡೆಯಬಹುದು ಎನ್ನುವುದನ್ನು ಚಂದ್ರಶೇಖರ್ ಸಾಧಿಸಿ ತೋರಿಸಿದ್ದಾರೆ. ಅವರು ಕೃಷಿ ಋಷಿಯಾಗಿದ್ದಾರೆ ಈ ಕಾರಣಕ್ಕೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ ಎಂದರು.
ಅವರ ಪ್ರೇರಣೆಯಿಂದ ಹೆಚ್ಚು ಯುವಕರು ಕೃಷಿಯತ್ತ ಒಲವು ತೋರುತ್ತಿರುವುದು ಮಾದರಿ ಕೆಲಸ ಅದನ್ನು ಎಲ್ಲರೂ ಅನುಸರಿಸಲುವಂತಾಗಲಿ ಎಂದರು.
ಗೌರವ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ನಾರಣಾಪುರ ಅವರು ಮಾತನಾಡಿ, ಪ್ರಶಸ್ತಿ ನನ್ನನ್ನು ಹುಡುಕಿಕೊಂಡು ಬಂದಿದೆ. ಅರ್ಜಿ ಹಾಕದೆ ಬಿಜೆಪಿ ಸರ್ಕಾರ ನಮ್ಮನ್ನು ಗುರುತಿಸಿರುವುದನ್ನು ಶ್ಲಾಘಿಸುತ್ತೇನೆ ಎಂದರು.
ಪ್ರಶಸ್ತಿ ಆಯ್ಕೆ ಸಮಿತಿಗೆ ಸರ್ಕಾರ ಮುಕ್ತ ಸ್ವಾತಂತ್ರö್ಯ ನೀಡಿರುವುದು ನಿಜವಾದ ಅರ್ಹರನ್ನು ಗುರುತಿಸಲು ಕಾರಣವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ವಿ.ಸುನೀಲ್ ಕುಮಾರ್ ಆಲೋಚನೆ ಮಾಡಿ, ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿ ಕೊಡುವ ವಿಚಾರದಲ್ಲಿ ನರೇಂದ್ರ ಮೋದಿ ಅವರು ಅನುಸರಿಸಿದ ಮಾನದಂಡಗಳ ಆಧಾರದಲ್ಲಿ ಅರ್ಹರಿಗೆ ಮತ್ತು ಯೋಗ್ಯರಿಗೆ ಪ್ರಶಸ್ತಿ ಸಿಗುವಂತೆ ನೋಡಿಕೊಂಡಿದ್ದಾರೆ. ಇದಕ್ಕಾಗಿ ಇಡೀ ನಮ್ಮ ರೈತರ ಪರವಾಗಿ ಅಭಿನಂದಿಸುತ್ತೇನೆ
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ಸಿಡಿಎ ಅಧ್ಯಕ್ಷ ಸಿ.ಆನಂದ್, ತಾ.ಪಂ.ಮಾಜಿ ಅಧ್ಯಕ್ಷ ಈಶ್ವರಳ್ಳಿ ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ವಿಕ್ರಾಂತ್, ರೈತ ಮೋರ್ಚಾ ಕಾರ್ಯದರ್ಶಿ ಪಾದಮನೆ ದಿನೇಶ್, ಗ್ರಾ.ಪಂ.ಸದಸ್ಯ ಮಧು ಇತರರು ಚಂದ್ರಶೇಖರ್ ಅವರ ನಿವಾಸಕ್ಕೆ ತೆರಳಿ ಶಾಲು ಹೊದಿಸಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g