ವಿದ್ಯುತ್ ಲೋಡ್ ಶೆಡ್ಡಿಂಗ್ ವಿರೋಧಿಸಿ ಮೆಸ್ಕಾಂ ಕಚೇರಿ ಮುಂದೆ ರೈತರ ಪ್ರತಿಭಟನೆ
1 min readಚಿಕ್ಕಮಗಳೂರು: ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಖಂಡಿಸಿ ಜಿಲ್ಲೆಯ ಮೆಸ್ಕಾಂ ಕಚೇರಿ ಎದುರು ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರಿನ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದ ರೈತರು ರಾಜ್ಯ ಸಂಪೂರ್ಣ ಬರಗಾಲಕ್ಕೆ ತುತ್ತಾಗಿದೆ, ಜಲಾಶಯಗಳಲ್ಲಿ ನೀರಿಲ್ಲ. ಬೆಳೆದ ಕೃಷಿ ಬೆಳೆಗಳು ಕೈಗೆ ಸಿಗದೇ ರೈತರ ತತ್ತರಿಸಿ ಹೋಗಿದ್ದಾರೆ. ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ ಎಂದು ಅಳಲು ತೋಡಿಕೊಂಡರು.
ಸರ್ಕಾರ ರೈತರ ಪಂಪ್ ಸೆಟ್ ಗೆ ಥ್ರೀ ಫೇಸ್ ವಿದ್ಯುತ್ ನೀಡದೆ ವಂಚನೆ ಮಾಡುತ್ತಿದೆ. ನಿರಂತರ ಲೋಡ್ ಶೆಡ್ಡಿಂಗ್ ಮಾಡಿ ದಿನಕ್ಕೆ 2 ಗಂಟೆಯೂ ವಿದ್ಯುತ್ ಸಿಗುತ್ತಿಲ್ಲ, ರಾಜ್ಯದಲ್ಲಿ ಸುಮಾರು 40 ಲಕ್ಷ ಕೃಷಿ ಪಂಪ್ ಸೆಟ್ ಬಳಕೆದಾರರು ಇದ್ದಾರೆ. ಸರ್ಕಾರ ಕೈಗಾರಿಕೆಗಳಿಗೆ ಹಾಗೂ ಐಷಾರಾಮಿ ಬಳಕೆಗೆ ಮಾತ್ರ ವಿದ್ಯುತ್ ಒದಗಿಸುತ್ತಿದೆ ಅಷ್ಟೇ ಅಲ್ಲದೇ ಕೃಷಿಗೆ ವಿದ್ಯುತ್ ಒದಗಿಸದೆ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ. ರಾಜ್ಯ ಸರ್ಕಾರ ರೈತರಿಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ನೀಡಬೇಕು ಎಂದು ಆರೋಪ ಮಾಡಿದ ಅವರು ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g