ಚಿಕ್ಕಮಗಳೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ
1 min readಚಿಕ್ಕಮಗಳೂರು : ಪ್ರತಿ ವರ್ಷದಂತೆ ಈ ವರ್ಷವು ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಕೋಟೆಯ ಪ್ರಮುಖ ಬೀದಿಗಳಲ್ಲಿ 250 ಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಶಾಖೆಗಳ ಮೂಲಕ ಎಲ್ಲರನ್ನೂ ಒಂದುಗೂಡಿಸಿ ಭಾರತವನ್ನು ಜಗದ್ಗುರುವಿನ ಕಡೆಗೆ ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ದೇಶ ವಿದೇಶಗಳಲ್ಲಿ ತನ್ನ ಶಾಖೆಯನ್ನು ತೆರೆದಿದೆ. ಚಿಕ್ಕಮಗಳೂರಿನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಶಾಖೆಗಳ ಸ್ವಯಂ ಸೇವಕರು ಗಣ ವೇಷ ಧರಿಸಿ, ಶಿಸ್ತುಬದ್ದವಾಗಿ ಕೋಟೆ ಆಂಜನೇಯ ದೇವಸ್ಥಾನದಿಂದ ಹೊರಟು ಚನ್ನಾಪುರ ರಸ್ತೆ, ಕಣದಾಲ್ ಸರ್ಕಲ್, ಶೇಷಪ್ಪನ ಬೀದಿ, ಹರೇಶ್ವರ ದೇವಸ್ಥಾನದ ಬೀದಿ, ಕಂಚಿಗಾರ್ ರಸ್ತೆ, ಕಂಡಕ್ಟರ್ ಅಂಗಡಿ, ಸುಗ್ಗಿ ಕಲ್ಲು, ವೀರಭದ್ರೇಶ್ವರ ದೇವಸ್ಥಾನ ರಸ್ತೆ, ಸುಬ್ಬನಾಯಕನ ಬೀದಿ, ಕೋಟೆ ಆಟೋ ಸರ್ಕಲ್, ಬೇಲೂರು ರಸ್ತೆಗಳಲ್ಲಿ ಸಾಗಿ 3 ಕಿ.ಮೀ. ಗೂ ಹೆಚ್ಚು ಪಥ ಸಂಚಲನ ನಡೆಸಿ ಪುನಃ ಕೋಟೆ ಆಂಜನೇಯ ದೇವಸ್ಥಾನದ ಬಳಿ ಸಂಪನ್ನಗೊಳಿಸಿದರು.
ಪಥ ಸಂಚಲನ ನಡೆಸುವ ಮಾರ್ಗದುದ್ದಕ್ಕೂ ಮಾತೆಯರು ರಂಗವಲ್ಲಿ ಹಾಕಿ ಪಥ ಸಂಚಲನಕ್ಕೆ ಮೆರಗು ನೀಡಿದರೆ, ಪುರುಷರು ಗಣ ವೇಷಧಾರಿಗಳ ಮೇಲೆ ಪುಷ್ಟವೃಷ್ಟಿ ಸುರಿಸಿ ಗಣವೇಷಧಾರಿಗಳ ಪಥ ಸಂಚಲನಕ್ಕೆ ತಮ್ಮ ರಾಷ್ಟ್ರ ಪ್ರೇಮವನ್ನು ತೋರಿಸಿದರು. ನಂತರ ಕೋಟೆಯ ಸರ್ಕಾರಿ ಶಾಲೆಯ ಆವರಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಆರ್ಎಸ್ಎಸ್ ಹಾಸನ ವಿಭಾಗ ಕಾರ್ಯವಾಹ ವಿಜಯ್ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g