May 20, 2024

MALNAD TV

HEART OF COFFEE CITY

ವೈದ್ಯನ ಮಾರಣಾಂತಿಕ ಹಲ್ಲೆ : ಆರೋಗ್ಯ ವಿಚಾರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

1 min read

ಚಿಕ್ಕಮಗಳೂರು : ಕಾಫಿನಾಡಲ್ಲಿ ವೈದ್ಯನ ಮೇಲೆ ತೋಟ ಕಾರ್ಮಿಕರು ಮಾರಣಾಂತಿಕ ಹಲ್ಲೆ ನಡೆದಿದ್ದು, ವೈದ್ಯನ ಆರೋಗ್ಯ ವಿಚಾರಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆಗೆ ಆಗಮಿಸಿ ವೈದ್ಯನ ಆರೋಗ್ಯ ವಿಚಾರಿಸಿದರು.

ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ಕ್ಷುಲ್ಲಕ ಕಾರಣಕ್ಕಾಗಿ ಒಂದು ತೋಟದ ಕಾರ್ಮಿಕರಿಗೂ ಮತ್ತೊಂದು ತೋಟದ ಕಾರ್ಮಿಕರಿಗೂ ಮಾತಿನ ಚಕಮಕಿ ಆರಂಭವಾಗಿದೆ. ವಾಗ್ವಾದವು ಕ್ರಮೇಣ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿ ತೋಟ ಕಾರ್ಮಿಕರ ಮೇಲೆ ಅಲ್ಲೆ ಪಕ್ಕದಲ್ಲಿರುವ ತೋಟದ ಕಾರ್ಮಿಕರು ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಪಕ್ಕದ ತೋಟದ ಕಾರ್ಮಿಕರ ಮಾರ್ಮಿಕ ಹಲ್ಲೆಗೊಳಗಾದ ಮತ್ತೊಂದು ತೋಟದ ಕಾರ್ಮಿಕರು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆ ವೈದ್ಯನಿಗೆ ಕರೆ ಮಾಡಿ ಸ್ಥಳಕ್ಕೆ ಬಂದು ತುರ್ತು ಚಿಕಿತ್ಸೆ ನೀಡುವಂತೆ ವಿನಂತಿಸಿಕೊಂಡಿದ್ದಾರೆ. ಕಾರ್ಮಿಕರ ಮನವಿಗೆ ಸ್ಪಂಧಿಸಿದ ಸರ್ಕಾರಿ ವೈದ್ಯರು ಗಾಯಗೊಳಗಾದ ಕಾರ್ಮಿಕರಿಗೆ ಚಿಕಿತ್ಸೆ ನೀಡಲು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲೆ ಸ್ಥಳದಲ್ಲಿದ್ದ ಮತ್ತೊಂದು ತೋಟದ ಕಾರ್ಮಿಕರು ಸರ್ಕಾರಿ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹೊಟ್ಟೆಯ ಭಾಗದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯನ ಆರೋಗ್ಯ ವಿಚಾರಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯನ ಆರೋಗ್ಯ ವಿಚಾರಿಸಿದ್ದಾರೆ. ಪ್ರಕರಣ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!