ಟಿಪ್ಪು ಮೂರ್ತಿ ನಿರ್ಮಾಣ ವಿವಾದ, ತನ್ವೀರ್ ವಿರುದ್ಧ ಫತ್ವಾ ಹೊರಡಿಸಬೇಕು : ಮುತಾಲಿಕ್ ಕಿಡಿ
1 min readಮುಸ್ಲಿಮರಲ್ಲಿ ಮೂರ್ತಿ ಪೂಜೆಗೆ ಅವಕಾಶ ಇಲ್ಲ. ಅವರು ಅಲ್ಲಾನನ್ನ ಬಿಟ್ಟರೆ ಪೈಗಂಬರ್ರನ್ನೂ ಪೂಜೆ ಮಾಡೋದಿಲ್ಲ. ಹಾಗಾದರೆ, ಮುಸ್ಲಿಮರು ಮೂರ್ತಿ ಪೂಜೆ ಪ್ರಾರಂಭಿಸಿದ್ದೇವೆ ಎಂದು ಒಪ್ಪಿಕೊಂಡoತೆ ಆಯ್ತು ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತನ್ವೀರ್ ಸೇಠ್ ವಿರುದ್ಧ ಕಿಡಿಕಾರಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರು
ಇಸ್ಲಾಂನಲ್ಲಿ ಮೂರ್ತಿ ಪೂಜೆ ಇಲ್ಲ ಅಂತ ಒಪ್ಪಿಕೊಳ್ಳಬೇಕು. ಇಲ್ಲವಾದರೆ, ನಮ್ಮ ದೇವಸ್ಥಾನಗಳನ್ನ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ. ಮೈಸೂರು ನಮ್ಮ ಸ್ವಾಭಿಮಾನದ ಸಾಂಸ್ಕೃತಿಕ ಕೇಂದ್ರ. ಮೈಸೂರು ಮಹಾರಾಜರ ಮಹಾರಾಣಿಯನ್ನ ಬಂಧಿಸಿ, ಮೋಸದಿಂದ ರಾಜ್ಯಭಾರ ಮಾಡಿದ ವ್ಯಕ್ತಿ ಆತ. ಅವನ ಮೂರ್ತಿಯನ್ನ ನೂರು ಅಲ್ಲ. ಒಂದಿoಚು ಜಾಗದಲ್ಲೂ ನಿರ್ಮಾಣ ಮಾಡೋದಕ್ಕೆ ಬಿಡೋದಿಲ್ಲ ಎಂದಿದ್ದಾರೆ. ಟಿಪ್ಪು ಸುಲ್ತಾನ್ನ ೧೦೦ ಅಡಿಯ ಮೂರ್ತಿ ಮಾಡುತ್ತೇವೆ ಅನ್ನೋದು ದೂರ್ತತನ, ಸೊಕ್ಕಿನ ಮಾತು. ಇವೆಲ್ಲಾ ನಡೆಯೋದಿಲ್ಲ. ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಮೂರ್ತಿ ಸಂಬoಧಪಟ್ಟoತೆ ಇದೆ. ಹಾಗಾದ್ರೆ, ಬಿಟ್ಟುಕೊಡಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲೂ ದೇವಸ್ಥಾನದ ಸ್ವರೂಪ ಸಿಕ್ಕಿದೆ. ಅದನ್ನೂ ಬಿಡಬೇಕು. ಶ್ರೀರಂಗಪಟ್ಟಣದ ಹನುಮನ ಮಂದಿರ ಇಂದು ಮದರಸ ಆಗಿದೆ. ಅದನ್ನೂ ಬಿಟ್ಟುಕೊಡಬೇಕು ಇಲ್ಲ, ತನ್ವೀರ್ ಸೇಠ್ ವಿರುದ್ಧ ಫತ್ವಾ ಹೊರಡಿಸಬೇಕು, ಬಹಿಷ್ಕಾರ ಹಾಕಬೇಕು ಎಂದಿದ್ದಾರೆ. ನೀವು ಇವುಗಳನ್ನ ಮಾಡ್ತೀರೋ ಇಲ್ವೋ ಗೊತ್ತಿಲ್ಲ. ಆದರೆ, ಯಾವುದೇ ಪರಿಸ್ಥಿತಿಯಲ್ಲೂ ಮೈಸೂರಲ್ಲಿ ಮೂರ್ತಿ ನಿರ್ಮಾಣಕ್ಕೆ ಬಿಡಲ್ಲ. ಬಾಬ್ರಿ ಮಸೀದಿ ಒಡೆದ ರೀತಿಯಲ್ಲೇ ಲಕ್ಷಾಂತರ ಜನ ಬಂದು ಮೂರ್ತಿಯನ್ನ ಒಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g