May 20, 2024

MALNAD TV

HEART OF COFFEE CITY

ಶೃಂಗೇರಿ ತಾಲೂಕು ಕಚೇರಿಯಲ್ಲಿ ಅಗ್ನಿ ಅವಘಡ, ದಾಖಲೆಗಳು ಸೇಫ್

1 min read

ಚಿಕ್ಕಮಗಳೂರು. ಜಿಲ್ಲೆಯ ಶೃಂಗೇರಿ ತಾಲೂಕಿನ ತಾಲೂಕು ಕಚೇರಿಯಲ್ಲಿ ಇಂದು ಬೆಳಗಿನ ಜಾವ ಶಾರ್ಟ್ ಸಕ್ರ್ಯೂಟ್‍ನಿಂದ ಅಗ್ನಿ ದುರಂತ ಸಂಭವಿಸಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ತಾಲೂಕು ಕಚೇರಿಯಲ್ಲಿದ್ದ ಹಳೆಯ ಬ್ಯಾಟರಿಗಳು, ಕಂಪ್ಯೂಟರ್‍ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ತಾಲೂಕು ಕಚೇರಿಯ ವೈರಿಂಗ್, ಮೀಟರ್ ಬೋರ್ಡ್‍ಗಳು ಸಂಪೂರ್ಣ ಸುಟ್ಟು ಹೋಗಿದ್ದು ಕಟ್ಟಡಕ್ಕೂ ಹಾನಿಯಾಗಿದೆ. ಕಳೆದ ರಾತ್ರಿ ಶೃಂಗೇರಿಯಲ್ಲಿ ಸುರಿದ ಭಾರೀ ಮಳೆಯಿಂದ ಕಟ್ಟಡದಲ್ಲಿ ಬಿರುಕು ಬಿಟ್ಟಿದ್ದ ಜಾಗದಿಂದ ಮಳೆ ನೀರು ಸೋರಿಕೆಯಾಗಿ ಶಾರ್ಟ್ ಸಕ್ರ್ಯೂಟ್ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಕೂಡಲೇ ಅಗ್ನಿ ಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನ ನಂದಿಸಿದ್ದಾರೆ. ಕಚೇರಿಯಲ್ಲಿರುವ ಯಾವುದೇ ದಾಖಲೆಗಳಿಗೂ ಯಾವುದೇ ಹಾನಿಯಾಗಿಲ್ಲ ಎಂದು ಶೃಂಗೇರಿ ತಹಶೀಲ್ದಾರ್ ಅಂಬುಜಾ ಸ್ಪಷ್ಟಪಡಿಸಿದ್ದಾರೆ.

 

ಘಟನೆ ಬೆಳಗಿನ ಜಾವ ಸಂಭವಿಸಿರುವುದರಿಂದ ಯಾವುದೇ ರೀತಿಯ ದೊಡ್ಡ ಅನಾಹುತವಾಗಿಲ್ಲ. ಒಂದು ವೇಳೆ ಹಗಲಲ್ಲಿ ಈ ದುರಂತ ಸಂಭವಿಸಿದ್ದರೆ ದೊಡ್ಡ ಪ್ರಮಾಣದ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!