ಕಾಫಿನಾಡಲ್ಲಿ 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲೇ ಮೊದಲ ಬಹಿಷ್ಕಾರ ಕೂಗು
1 min read
ಚಿಕ್ಕಮಗಳೂರು. ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರ ಗ್ರಾಮದಲ್ಲಿ ಮುಂಬರೋ ವಿಧಾನಸಭಾ ಚುನಾವಣೆಯನ್ನ ಬಹಿಷ್ಕಾರ ಹಾಕಲು ಇಲ್ಲಿನ ಜನ ತೀರ್ಮಾನಿಸಿದ್ದಾರೆ. ಹಾಡುಗಾರ ಗ್ರಾಮದಲ್ಲಿ ಸುಮಾರು 93ಕ್ಕೂ ಹೆಚ್ಚಿನ ಮನೆಗಳಿವೆ. 480ಕ್ಕೂ ಹೆಚ್ಚಿನ ಜನ ವಾಸಿವಿದ್ದಾರೆ. ಆದರೆ, 2019ರಲ್ಲಿ ಸುರಿದ ಭಾರೀ ಮಳೆಯಿಂದ ರಸ್ತೆ ಹಾಳಾಗಿದ್ದು ಈವರಗೂ ದುರಸ್ಥಿ ಮಾಡಿಲ್ಲ. ಶಾಸಕ ಟಿ.ಡಿ.ರಾಜೇಗೌಡ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ನೋ ಯೂಸ್. ಹಾಗಾಗಿ, ಈ ಭಾಗದ ಜನ ಮುಂಬರೋ ವಿಧಾನಸಭೆ ಚುಣಾವಣೆಯನ್ನ ಬಹಿಷ್ಕಾರ ಹಾಕಲು ತೀರ್ಮಾನಿಸಿದ್ದಾರೆ. 2019ರ ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಗೆ ಹಾಡುಗಾರು ಮುಖ್ಯ ರಸ್ತೆಯ ಸೇತುವೆ ಕುಸಿದಿತ್ತು. 2019ರ ಬಳಿಕ ಪ್ರತಿ ವರ್ಷ ಮಳೆಗಾಲದಲ್ಲಿ ಸೇತುವೆ ಕುಸಿಯುತ್ತಿದೆ. ಸೇತುವೆ ಕುಸಿದಾಗಲೆಲ್ಲಾ ಸ್ಥಳಕ್ಕೆ ಭೇಟಿ ನೀಡುವ ಅಧಿಕಾರಿಗಳು, ಶಾಸಕರು ಹೊಸ ಸೇತುವೆ ನಿರ್ಮಾಣಕ್ಕೆ ಹಣ ನೀಡುವುದಾಗಿ ಹೇಳಿ ಭರವಸೆ ನೀಡಿದರೋ ವಿನಃ ಇದುವರೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಗ್ರಾಮದ ಸಂಪರ್ಕಕ್ಕಿರುವ ಈ ಏಕೈಕ ಸೇತುವೆಯ ಮೇಲೆ ಮಳೆ ಬಂದಾಗಲೆಲ್ಲ ಹೊಳೆಯ ನೀರು ಹರಿಯುತ್ತಿದ್ದು,
ಇದರ ಮೇಲೆ ಸಂಚರಿಸುವ ಶಾಲಾ-ಮಕ್ಕಳು, ಗ್ರಾಮಸ್ಥರು ನೀರಿನ ಸೆಳತಕ್ಕೆ ಸಿಕ್ಕಿ ಪ್ರಾಣ ಹಾನಿಗೊಳಗಾದರೆ ಯಾರು ಹೊಣೆ ಎಂದು ಹಳ್ಳಿಗರ ಪ್ರಶ್ನಿಸಿದ್ದಾರೆ. ಶಾಸಕರ ಅನುದಾನ ಸೇರಿದಂತೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಹ ಕಾಮಗಾರಿಗಾಗಿ ರಾಜ್ಯ ಸರ್ಕಾರದಿಂದ ನೂರಾರು ಕೋಟಿ ಅನುದಾನ ಬಿಡುಗಡೆಯಾಗುತ್ತಿದ್ದರೂ ಸೇತುವೆ ದುರಸ್ಥಿಗೆ ಶಾಸಕರು ಹಣ ನೀಡದಿರುವುದರಿಂದ ಶಾಸಕರು ಹಾಗೂ ಅಧಿಕಾರಿಗಳ ವಿರುದ್ಧ ಜನ ಅಸಮಾಧಾನ ಹೊರಹಾಕಿದ್ದಾರೆ. ಸೇತುವೆ ನಿರ್ಮಿಸಿ ಕೊಡದಿದ್ದರೆ ಹಾಡುಗಾರ ಗ್ರಾಮಸ್ಥರು ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದ್ದು, ಊರಿನ ಅಭಿವೃದ್ಧಿಗಾಗಿ ರಾಜಕೀಯವನ್ನು ಬದಿಗಿಟ್ಟು ಸಂಘಟಿತ ಹೋರಾಟ ಮಾಡುತ್ತೇವೆ ಎಂದಿದ್ದಾರೆ. 15 ದಿನಗಳ ಕಾಲದ ಎಚ್ಚರಿಕೆ ನೀಡಿರುವ ಈ ಗ್ರಾಮದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g