May 2, 2024

MALNAD TV

HEART OF COFFEE CITY

ಹರಿಹರಪುರ ಮಠದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಸ್ಕಾರ ಹಬ್ಬದ ಸಂಭ್ರಮ

1 min read

 

ಚಿಕ್ಕಮಗಳೂರು : ಸನಾತನ ಹಿಂದೂ ಪರಿಷತ್ ಹಾಗೂ ಹರಿಹರಪುರ ಶ್ರೀಮಠದ ನೇತೃತ್ವದಲ್ಲಿ ಸಮಾನ ಸಂಸ್ಕಾರ ಸಮಾವೇಶ ( ಸಂಸ್ಕಾರ ಹಬ್ಬ) ಸಾವಿರಾರು ಜನರು ಹಾಗೂ ಭಕ್ತರ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಮಠದಲ್ಲಿ ನಡೆದ ಈ ಸಂಸ್ಕಾರ ಹಬ್ಬ ಕೊಪ್ಪ ತಾಲೂಕಿನ 23 ಸಾವಿರಕ್ಕೂ ಹೆಚ್ಚು ಹಿಂದೂಗಳ ಮನೆಗಳಿಗೆ ತೆರಳಿ ಐದು ಉತ್ತಮ ಸಮಾನ ಸಂಸ್ಕಾರಗಳ ಬಗ್ಗೆ ಮಾಹಿತಿ ನೀಡಿ, ಮೌಲ್ಯಯುತವಾದ ಸಮಾಜ ನಿರ್ಮಾಣ ಮಾಡುವ ಜೊತೆಗೆ ಶಾಲಾ, ಕಾಲೇಜು ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಭಗವದ್ಗೀತೆಯ ಕಂಠಪಾಠ ಮಾಡಿಸಿ, ಜಾತಿ-ಭೇದ ಮರೆತು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಸನಾತನ ಹಿಂದೂ ಧರ್ಮದ ಜೊತೆಗೆ ಸಂಸ್ಕಾರ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು,

ಇಂತಹ ಸಂಸ್ಕಾರ ಹಬ್ಬದ ಸಮಾವೇಶ ಮಾಡುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಇಂತಹ ಸಂಸ್ಕಾರ ನಮ್ಮ ಸಮಾಜದಲ್ಲಿ ಮನೆ-ಮನೆ ತಲುಪುವ ಅಗತ್ಯವಿದೆ. ದೇಶ ಹಾಗೂ ನಮ್ಮ ಸಂಸ್ಕೃತಿ ಸಾರುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹರಿಹರಪುರ ಶ್ರೀಮಠದ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ, ಯಾರ ಭಾವನೆಗೂ ಧಕ್ಕೆ ಬಾರದಂತೆ ಎಲ್ಲರನ್ನೂ ಒಂದು ಚೌಕಟ್ಟಿನಲ್ಲಿ ತರುವ ನಿಟ್ಟಿನಲ್ಲಿ ಈ ಕಾರ್ಯ ನಡೆಯುತ್ತಿದೆ. ಸನಾತನ ಹಿಂದೂ ಧರ್ಮದಲ್ಲೇ ಇಂತಹಾ ಸಮಾವೇಶ ಇದೇ ಮೊದಲು ಎಂದರು. 23 ಸಮುದಾಯ ಗುರುತಿಸಿ, ಪರಿಶಿಷ್ಠ, ಜಾತಿ, ಪಂಗಡದಿಂದ ಪುರೋಹಿತ ವರ್ಗದವರನ್ನು ಸೇರಿಸಿಕೊಂಡು ಈ ಸಮಾವೇಶ ಮಾಡುತ್ತಿದ್ದೇವೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!