May 17, 2024

MALNAD TV

HEART OF COFFEE CITY

ಒಣಗಿ ನಿಂತಿರುವ ಬೃಹದಾಕಾರ ಮರವನ್ನು ತೆರವುಗೊಳಿಸಲು ಒತ್ತಾಯ

1 min read

ನರಸಿಂಹರಾಜ ಪುರ : ಮನೆಯ ಸಮೀಪ ಒಣಗಿ ನಿಂತಿರುವ ಬೃಹದಾಕಾರದ ಮರವನ್ನು ಆ ಸ್ಥಳ ದಿಂದ ತೆರವುಗೊಳಿಸುವ ಮೂಲಕ ನೆಮ್ಮದಿಯಿಂದ ಜೀವನ ನಡೆಸಲು ಅಧಿಕಾರಿಗಳು ಅನುವು ಮಾಡಿಕೊಡಬೇಕು ಎಂದು ಶೆಟ್ಟಿಹಿತ್ಲು ಗ್ರಾಮದ ಬಿ.ಎಸ್.ಗೋಪಾಲ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಎನ್.ಆರ್.ಪುರ ತಾಲ್ಲೂಕಿನ ಬನ್ನೂರು ಸಮೀಪದ ಶೆಟ್ಟಿಹಿತ್ಲು ಗ್ರಾಮದಲ್ಲಿ ನಮ್ಮ ಕುಟುಂಬವು ಸುಮಾರು 30ಕ್ಕೂ ಹೆಚ್ಚು ವರ್ಷಗಳಿಂದ ವಾಸಿಸುತ್ತಿದ್ದೇವೆ. ಆದರೆ ಮನೆಯ ಪಕ್ಕದಲ್ಲೇ ಒಣಗಿ ನಿಂತಿರುವ ಬೃಹದಾಕಾರದ ಮರ ಬೆಳೆದು ನಿಂತು ಇದೀಗ ಬೀಳುವ ಸ್ಥಿತಿಯ ಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಒಣಗಿ ನಿಂತಿರುವ ಮರವನ್ನು ತೆರವುಗೊಳಿಸುವ ವಿಷಯವಾಗಿ ಗ್ರಾಮ ಪಂಚಾಯಿತಿ, ಅರಣ್ಯ ಇಲಾಖೆ ಹಾಗೂ ಜಾಗದ ಮಾಲೀಕರಿಗೆ ಹಲವಾರು ಮನವಿ ಮಾಡಲಾಗಿತ್ತು. ಈ ವಿಚಾರವಾಗಿ ಸ್ಥಳ ಪರಿಶೀಲನೆ ನಡೆಸಲಾ ಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಕೆಲವು ತಿಂಗಳ ಹಿಂದೆ ಮರ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಮನವಿಗೆ ಸ್ಪಂದಿಸಿ ಕೊಪ್ಪದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಹಾಗೂ ಬಾಳೆಹೊನ್ನೂರಿನ ವಲಯ ಅರಣ್ಯಾಧಿಕಾರಿ ಸೂಕ್ತ ನಿರ್ದೇಶನ ನೀಡಿದ್ದರೂ ಸಹ ಮರವನ್ನು ತೆರವುಗೊಳಿಸಲು ಮುಂದಾಗಿರುವ ಪರಿಣಾಮ ನಮ್ಮ ಕುಟುಂಬವು ಪ್ರತಿನಿತ್ಯ ಭಯದ ವಾತಾವರಣದಲ್ಲಿ ಬದುಕುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಮಳೆಗಾಲವು ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಮರ ಬೀಳುವ ಸಂಭವ ಹೆಚ್ಚಿದೆ. ಇದರಿಂದ ಕುಟುಂಬವು ಪ್ರತಿನಿತ್ಯ ಭಯದಿಂದ ಬದುಕುವಂತಾಗಿದೆ. ಈ ಬಗ್ಗೆ ಜಾಗದ ಮಾಲೀಕರಿಗೆ ತಿಳಿಸಿದರೆ  ಇಲಾಖೆಗೆ ತಿಳಿಸಿದರೆನ್ನಲಾಗಿದೆ ಎಂದು ಸಬೂಬು ಹೇಳಲಾಗುತ್ತಿರುವ ಪರಿಣಾಮ ಕುಟುಂಬವು ತೀವ್ರ ಸಂಕಷ್ಟ ಎದುರಿಸುತ್ತಿದೆ ಎಂದಿದ್ದಾರೆ.

ಮರ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ತೆರವು ಕಾರ್ಯಾಚರಣೆ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಅನಾಹುತಗಳು ಸಂಭವಿಸಿದ್ದಲ್ಲಿ ನೇರ ಹೊಣೆಯನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಅಧಿಕಾರಿಗಳು ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!