ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಜಾರಿಗೊಳಿಸಲು ಒತ್ತಾಯ
1 min read
ಚಿಕ್ಕಮಗಳೂರು : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮಾಸಿಕ ಗೌರವಧನ ಹೆಚ್ಚಳ, ನಿವೃತ್ತ ಇಂಡಿಗಂಟು ಹಾಗೂ ಪೆನ್ಷನ್ ಜಾರಿ ಮಾಡಬೇಕು ಎಂದು ಆಗ್ರಹಿಸಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಎದುರು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಎಐಟಿಯುಸಿ ಜಿಲ್ಲಾಧ್ಯಕ್ಷೆ ಗ್ರೇಟ್ಟಾ ಫರ್ನಾಂಡೀಸ್ ಕಾರ್ಯಕರ್ತೆಯರಿಗೆ ನೀಡಿರುವ ಕಳಪೆ ಗುಣಮಟ್ಟದ ಮೊಬೈಲ್ಗಳನ್ನು ಹಿಂಪಡೆಯಬೇಕು. ಆರೋಗ್ಯ ಇಲಾಖೆಯ ಸಮೀಕ್ಷಾ ಕಾರ್ಯಕ್ಕೆ ಒತ್ತಡ ಹೇರುತ್ತಿರುವುದನ್ನು ನಿಲ್ಲಿಸಬೇಕು. ಗೌರವಧನ ಹೆಚ್ಚಳ ಹಾಗೂ ಪೆನ್ಷನ್ ನೀಡುವ 6ನೇ ಗ್ಯಾರಂಟಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಕಳೆದ ನಾಲ್ಕು ವರ್ಷಗಳ ಹಿಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗಿರುವ ಮೊಬೈಲ್ಗಳು ಕಳಪೆ ಗುಣಮಟ್ಟದಿಂದ ಕೂಡಿರುವ ಪರಿಣಾಮ ಮಾಹಿತಿ ಸಂಗ್ರಹ ಸೇರಿದಂತೆ ಮತ್ತಿತರೆ ಕೆಲಸ ನಿರ್ವಹಿಸುವುದು ಕಷ್ಟಕರ ವಾಗಿದೆ. ಅದಲ್ಲದೇ ಆರೋಗ್ಯ ಇಲಾಖೆಯ ಕಾರ್ಯಕ್ರಮವಾದ ಆರೋಗ್ಯ ಸಮಿಕ್ಷೆಯನ್ನು ಸಹ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸಿ ಮೊಬೈಲ್ಗಳಲ್ಲೇ ಅಪ್ಲೋಡ್ ಮಾಡಲು ಒತ್ತಡ ಹೇರಲಾಗುತ್ತಿದೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g