May 18, 2024

MALNAD TV

HEART OF COFFEE CITY

ಅಕ್ರಮವಾಗಿ ಬೀಟೆ ಮರ ಕಡಿದು ಸಾಮಿಲ್ ಗೆ ಸಾಗಿಸಿದ ಅರಣ್ಯ ಅಧಿಕಾರಿ ಸಸ್ಪೆಂಡ್

1 min read

 

ಚಿಕ್ಕಮಗಳೂರು. ರಕ್ಷಕರೇ ಭಕ್ಷಕರಾಗಿ ಅರಣ್ಯವನ್ನ ಉಳಿಸಿ ಬೆಳೆಸಬೇಕಾದ ಅಧಿಕಾರಿಗಳೇ ಅಕ್ರಮವಾಗಿ ಬೀಟೆ ಮರವನ್ನ ಕಡಿದು ಸಾಮಿಲ್ ಗೆ ಸಾಗಿಸಿರುವ ಘಟನೆ ತಾಲೂಕಿನ ಆಲ್ದೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ರಮವಾಗಿ ಮರವನ್ನ ಕಡಿದು ಸಾಗಿಸಿದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆ ಉಪವಲಯ ಅರಣ್ಯ ಅಧಿಕಾರಿ ದರ್ಶನ್ ಎಂಬುವರನ್ನು ಡಿ.ಎಫ್.ಓ. ಕ್ರಾಂತಿ ಅಮಾನತ್ತು ಮಾಡಿ ಆದೇಶೀಸಿದ್ದಾರೆ.‌

ತಾಲೂಕಿನ ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿ ಆನಿಗನಹಳ್ಳಿ ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಐದು ಬೀಟೆ ಮರಳನ್ನ ಕಡಿಯಲಾಗಿತ್ತು. ಸ್ಥಳೀಯರು ವಲಯ ಅರಣ್ಯಾಧಿಕಾರಿ ಹಾಗೂ ಡಿ.ಎಫ್.ಓ.ಗೆ ದೂರು ನೀಡಿದ್ದರು. ಇದೆ ವೇಳೆ, ಮರ ಕಡಿದವರು ಗ್ರಾಮಸ್ಥರ ಜೊತೆ ಮಾತನಾಡಿದ ಆಡಿಯೋ ಕೂಡ ವೈರಲ್ ಆಗಿತ್ತು. ಆಡಿಯೋದಲ್ಲಿ ಮರ ಕಡಿದವರು ದರ್ಶನ್ ಫಾರೆಸ್ಟರ್ ಹೇಳಿದ್ದಕ್ಕೆ ಮರ ಕಡಿದೆವು ಎಂದು ಮಾತನಾಡಿದ್ದರು.ಸುಮಾರು 20 ರಿಂದ 25 ಮೀಟರ್ ಬೀಟೆ ಮರವನ್ನ ಕಡಿದು ಸ್ವಲ್ಪ ಮರವನ್ನ ಹಾಸನ ಜಿಲ್ಲೆ ಬೇಲೂರಿನ ಸಾಮಿಲ್ ಗೆ ರವಾನಿಸಿದ್ದರು. ಮತ್ತೊಂದಷ್ಟು ಮರವನ್ನ ಮನೆಗೆ ಪೀಠೋಪಕರಣ ಮಾಡಲು ಕಾರ್ಪೆಂಟರ್ ಮನೆಗೆ ಕಳಿಸಿದ್ದರು. ವಿಷಯ ತಿಳಿದ ಕೂಡಲೇ ತನಿಖೆಗೆ ಮುಂದಾದ ಅರಣ್ಯ ಅಧಿಕಾರಿಗಳಿಗೆ ಅಧಿಕಾರಿಯ ಅಕ್ರಮವಾಗಿ ಮರವನ್ನು ಕುರಿತು ಸಾಗಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಜೊತೆಗೆ ಅಕ್ರಮವಾಗಿ ಮರ ಕಡಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದರ್ಶನ್ ಫಾರೆಸ್ಟರ್ ಹೇಳಿದ್ದಕ್ಕೆ ಮರ ಕಡಿದು ಸಾಗಿಸಿದೆವು ಎಂದು ಒಪ್ಪಿಕೊಂಡಿದ್ದಾರೆ. ಹಾಗಾಗಿ ಹರೀಶ್, ಪ್ರದೀಪ್, ಮಂಜು ಹಾಗೂ ಬೇಲೂರಿನ ಮರದ ಸಾಮಿಲ್ಲಿನ ಮಾಲೀಕ ಸಿರಾಜ್ ಎಂಬ ನಾಲ್ವರ ಮೇಲೆ ಪ್ರಕರಣ ದಾಖಲಿಸಿರುವ ಅರಣ್ಯ ಅಧಿಕಾರಿಗಳು ಅರಣ್ಯವನ್ನ ರಕ್ಷಿಸಬೇಕಾದ ಅಧಿಕಾರಿಯೇ ಮರಗಳನ್ನ ಕಡಿಸಿದ್ದರಿಂದ ಫಾರೆಸ್ಟರ್ ದರ್ಶನ್ ಮೇಲೆ ಇಲಾಖೆಗೆ ಕ್ರಮ ಕೈಗೊಂಡು ಅಮಾನತ್ತು ಮಾಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!