ರೇಣುಕಾಚಾರ್ಯ ಪ್ರಶಸ್ತಿಗೆ ಬಾಜನರಾಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
1 min readಚಿಕ್ಕಮಗಳೂರು : ಬಾಳೆಹೊನ್ನೂರಿನ ರಂಭಾಪುರಿ ಮಠದಿಂದ ನೀಡುವ ರೇಣುಕಾಚಾರ್ಯ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭಾಜನರಾಗಿದ್ದಾರೆ.
ವೀರಶೈವ ಲಿಂಗಾಯತರ ಪಂಚ ಪೀಠಗಳಲ್ಲಿ ಮೂಲ ಪೀಠವಾಗಿರುವ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಪೀಠದಿಂದ ಸಾಧಕರಿಗೆ ರೇಣುಕಾಚಾರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಜೀವಮಾನದ ಸಾಧನೆಯನ್ನು ಗುರುತಿಸಿ, ಈ ಬಾರಿ ಕೊಡ ಮಾಡಲಿರುವ ರೇಣುಕಾಚಾರ್ಯ ಪ್ರಶಸ್ತಿಗೆ ಬಿಎಸ್ ಯಡಿಯೂರಪ್ಪನವರನ್ನು ಆಯ್ಕೆ ಮಾಡಲಾಗಿದೆ.
ರಂಭಾಪುರಿ ಮಠದಲ್ಲಿ ನಡೆಯುತ್ತಿರುವ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಬಿಎಸ್ ಯಡಿಯೂರಪ್ಪನವರಿಗೆ ರೇಣುಕಾಚಾರ್ಯ ಪ್ರಶಸ್ತಿಯನ್ನು ನೀಡಿ ಗೌರವಹಿಸಲಿದ್ದು, ಈ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನೀಡಿ ಗೌರವಿಸಲಿದ್ದಾರೆ.
ಬಿಎಸ್ ಯಡಿಯೂರಪ್ಪನವರ ರಾಜಕೀಯ ನಿವೃತ್ತಿಯ ನಿರ್ಧಾರದ ಬಳಿಕ ಶ್ರೀ ಪೀಠದಿಂದ ಅವರ ಜೀವಮಾನದ ಸಾಧನೆಯನ್ನು ಗುರುತಿಸಿ ಮಹತ್ವದ ಪ್ರಶಸ್ತಿಯನ್ನು ನೀಡಲಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g