ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗವಾಲು ವಾಹನ ಅಪಘಾತ
1 min read
ಚಿಕ್ಕಮಗಳೂರು: ಮಾಜಿ ಸಿ.ಎಂ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದೊಳಗೆ ನುಗ್ಗಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ತಾಲೂಕಿನ ಮಲ್ಲೇನಹಳ್ಳಿ ಸಮೀಪ ನಡೆದಿದೆ.
ಚಿಕ್ಕಮಗಳೂರಿನಲ್ಲಿ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ಮುಗಿಸಿಕೊಂಡು ಚಿಕ್ಕಮಗಳೂರಿನಿಂದ ಶಾಂತವೇರಿ ಮೂಲಕ ಶಿವಮೊಗ್ಗಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮಾನವೀಯತೆ ಮೆರೆದ ಸಿದ್ದು, ಡಿಕೆಶಿ
ಮದ್ಯಾಹ್ನದ ನಂತರ ಮಳೆ ಸುರಿಯಿತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು ಬೆಂಗಾವಲು ವಾಹನದ ಸಿಬ್ಬಂದಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ವಾಹನ ಅಪಘಾತ ಸಂಭವಿಸುತ್ತಿದ್ದoತೆ ಮಳೆಯ £ನಡುವೆಯೂ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಿನಿಂದ ಇಳಿದು ಬಂದು ವಾಹನದಲ್ಲಿದ್ದ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲು ನೇರವಾಗಿದ್ದಾರೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g