ಮಹಿಳೆಯ ಮೇಲೆ ಆಸಿಡ್ ದಾಳಿ ಪ್ರಕರಣ- ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಚಿಕ್ಕಮಗಳೂರು : ಶೃಂಗೇರಿ ಮಹಿಳೆಯ ಮೇಲೆ ಆಸಿಡ್ ದಾಳಿ ಪ್ರಕರಣ ಸಂಭಂದ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಈ ಪ್ರಕರಣಕ್ಕೆ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತ್ಯ ಹಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಮೆಣಸೆಯಲ್ಲಿ ಏಪ್ರಿಲ್ 18, 2015 ರಂದು ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿಕೊಂಡು ಬರುವಾಗ ಯುವತಿಗೆ ಆಸಿಡ್ ದಾಳಿ ನಡೆದಿತ್ತು.
ಆಪರಾಧಿ ಗಣೇಶ್ ಯುವತಿಯನ್ನ ಮದುವೆಯಾಗುಂತೆ ಪೀಡಿಸುತ್ತಿದ್ದ ಆದರೆ ಯುವ ಒಪ್ಪದ ಹಿನ್ನೆಲೆ ಯುವತಿಯ ಮೇಲೆ ಪೂರ್ವ ನಿಯೋಚಿತವಾಗಿ ಆಸಿಡ್ ದಾಳಿ ಮಾಡಲಾಗಿದೆ ಎಂದು ಸಾಭೀತಾಗಿದೆ.ಈ ಪ್ರಕರಣದ ಕಳೆದ ಆರು ವರ್ಷಗಳಿಂದ ಸುದೀರ್ಘ ವಿಚಾರಣೆಯಲ್ಲಿ ಪ್ರಕರಣಕ್ಕೆ ಇಂದು 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಾರ್ಕಿಕವಾಗಿ ಅಂತ್ಯಗೊಳಿಸಿದೆ.ಆಪರಾಧಿಗಾಳಾದ ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬುವವರಿಗೆ ಜೀವಾವಧಿ ಶಿಕ್ಷೆ ಹಾಗೂ 20 ಲಕ್ಷ ದಂಡ ವಿಧಿಸಿದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ ಸಂಗ್ರೇಶಿ ಆದೇಶಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g