ಬಿಜೆಪಿ ನಗರ ಮಂಡಲ ವಕ್ತಾರರಾಗಿ ಗೌರಿಕಾಲುವೆ ರೀನೇಶ್ ನೇಮಕ
1 min read
ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಬಿಜೆಪಿ ನಗರ ಮಂಡಲದ ವಕ್ತಾರರನ್ನಾಗಿ ಗೌರಿ ಕಾಲುವೆಯ ವಕೀಲರಾದ ರೀನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ, ಕುಪ್ಪೇನಹಳ್ಳಿಯ ಸತೀಶ್ ಕುಮಾರ್,ಚಿಕ್ಕಮಗಳೂರು ನಗರ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಗೌರಿ ಕಾಲುವೆಯ ರೀನೇಶ್ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ನೊಂದವರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಸಾಮಾಜಿಕ ಜೀವನದ ಬದ್ಧತೆಯಿಂದ ಬಡವರು ಹಾಗೂ ಜನಾಂಗಕ್ಕೆ ಸಲ್ಲಿಸಿದ ಸೇವೆ ಗಣನೀಯವಾದದ್ದು.
ಅದೇ ರೀತಿ ಪಕ್ಷದಲ್ಲಿನ ಹಲವಾರು ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಅದೇ ರೀತಿ ತಮ್ಮನ್ನ ಬಿಜೆಪಿ ನಗರ ಮಂಡಲದ ವಕ್ತಾರನ್ನಾಗಿ ನೇಮಕ ಮಾಡಲಾಗಿದೆ. ಹಾಗಾಗಿ, ತಾವು ಪಕ್ಷದ ಶಿಸ್ತು ಹಾಗೂ ಬದ್ಧತೆಯೊಂದಿಗೆ ತಮ್ಮನ್ನು ತಾವು ಸಮರ್ಪಿಸಿಕೊಂಡು ಪಕ್ಷದ ಅಭಿವೃದ್ಧಿಗೆ ಶ್ರಮಿಸುತ್ತೀರಾ ಎಂದು ಭಾವಿಸಿರುತ್ತೇವೆ. ತಾವು ಪಕ್ಷ ಸಂಘಟನೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ನಿಮ್ಮ ಸೇವೆ ಪಕ್ಷಕ್ಕೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗುವಂತೆ ಪಕ್ಷದ ಕಾರ್ಯ ನಿರ್ವಹಿಸಬೇಕಾಗಿ ಕೋರುತ್ತೇನೆ ಎಂದು ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್ ನೇಮಕ ಮಾಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g