ಗಾಯತ್ರಿ ಶಾಂತೇಗೌಡ ಗೆಲುವು ನಿಶ್ಚಿತ_ಸಿ.ಎನ್ ಅಕ್ಮಲ್
1 min readಚಿಕ್ಕಮಗಳೂರು: ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ನೂರಕ್ಕೆ ನೂರು ಭಾಗ ಜಯಗಳಿಸುವುದು ನಿಶ್ಚಿತ ಎಂದು ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ವಿಶ್ವಾಸ ವ್ಯಕ್ತಪಡಿಸಿದರು.ಕಡೂರು ವಿಧಾನ ಸಭಾ ಕ್ಷೇತ್ರದಲ್ಲಿ ಕನಿಷ್ಟ ೧೫೦ ಮತಗಳ ಮುನ್ನಡೆ ಸಾಧಿಸಲಿದ್ದು, ಬಹುತೇಕ ಗ್ರಾಮಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪರವಾಗಿ ಮತಗಳು ಸಿಗಲಿದೆ. ಇತ್ತೀಚಿನ ಬೆಲೆ ಏರಿಕೆ, ನಿರುದ್ಯೋಗ, ವಷ್ಟೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯಾಗಿದೆ. ಬಿಜೆಪಿ ಆಡಳಿತವಧಿಯಲ್ಲಿ ಜಿಲ್ಲೆಯ ಅಭಿವೃದ್ದಿ ಸಂಪೂರ್ಣವಾಗಿ ಕುಂಠಿತಗೊoಡಿದೆ ಎಂದು ದೂಷಿಸಿದರು.
ನಗರಸಭೆಯಲ್ಲಿ ಭ್ರಷ್ಟಚಾರ ಮಿತಿ ಮೀರಿದ್ದು ಪಕ್ಷದ ಮುಖಂಡರು ಸರ್ವಾಧಿಕಾರಿ ಧೋರಣೆ ಮೂಲಕ ಆಡಳಿತ ನಡೆಸುತ್ತಿದ್ದರು. ಇದೀಗ ಪರಿಷತ್ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಅನುಭವಿಸುವ ಮೂಲಕ ಮುಖಭಂಗವಾಗಲಿದೆ ಎಂದರು.ಈ ಹಿಂದೆ ಪರಿಷತ್ ಸದಸ್ಯರಾಗಿದ್ದ ವೇಳೆ ಕಾಂಗ್ರೆಸ್ನ ಗಾಯತ್ರಿ ಶಾಂತೇಗೌಡ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಜನರ ಕಷ್ಟಗಳನ್ನು ಅರಿಯುವಲ್ಲಿ, ಸದಾ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಜಿಲ್ಲೆಯ ಮತದಾರರರು ಬಿಜೆಪಿಯ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಅತಿ ಹೆಚ್ಚು ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಭರವಸೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g