ಕೋವಿಶೀಲ್ಡ್ ಲಸಿಕೆ ಪಡೆದ ಸವಿತಾ ಸಮಾಜದ ಕ್ಷೌರಿಕರು
1 min readಚಿಕ್ಕಮಗಳೂರು : ಜಿಲ್ಲಾಡಳಿತ ಆರೋಗ್ಯ ಇಲಾಖೆ ಹಾಗೂ ಚಿಕ್ಕಮಗಳೂರು ತಾಲೂಕು ಸವಿತಾ ಸಮಾಜ ಘಟಕದ ವತಿಯಿಂದ ಚಿಕ್ಕಮಗಳೂರು ತಾಲೂಕಿನ ಕ್ಷೌರಿಕ ವೃತ್ತಿ ಮಾಡುವ ಸವಿತಾ ಸಮಾಜದ ಬಂಧುಗಳಿಗೆ ನಿನ್ನೆ ಮತ್ತು ಇಂದು ಎರಡು ದಿನಗಳ ಕಾಲ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.
ಕ್ಷೌರಿಕ ವೃತ್ತಿ ಮಾಡುವ ಸವಿತಾ ಸಮಾಜದವರನ್ನು ಕೊರೋನ ವಾರಿಯರ್ಸ್ಗಳೆಂದು ಗುರುತಿಸಿ ಕೋವಿಶೀಲ್ಡ್ ಲಸಿಕೆ ನೀಡುವಂತೆ ಕರ್ನಾಟಕ ರಾಜ್ಯ ಸವಿತಾ ಸಮಾಜದವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ರಾಜ್ಯ ಸರ್ಕಾರವು ಜಿಲ್ಲಾಡಳಿತಕ್ಕೆ ಹಾಗೂ ಆರೋಗ್ಯ ಇಲಾಖೆಗೆ ಸವಿತಾ ಸಮಾಜದ ಕ್ಷೌರಿಕರಿಗೂ ಲಸಿಕೆ ನೀಡುವಂತೆ ನಿರ್ದೇಶನ ಮಾಡಲಾಗಿತ್ತು. ಅದರಂತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕ್ಷೌರಿಕರನ್ನು ಕೊರೋನ ವಾರಿಯರ್ಸ್ ಗಳೆಂದು ಗುರುತಿಸಿ ನಗರದ ಜೂನಿಯರ್ ಕಾಲೇಜಿನಲ್ಲಿ ಪ್ರತ್ಯೇಕ ವಿಭಾಗ ತೆರೆದು ಎರಡು ದಿನಗಳ ಕಾಲ ಕೋವಿಶೀಲ್ಡ್ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ 154 ಜನ ಕ್ಷೌರಿಕರಿಗೆ ಕೋವಿಶಿಲ್ಡ್ ಲಸಿಕೆ ನೀಡಲಾಯಿತು. ಲಸಿಕೆ ಪಡೆದ ಪ್ರತಿಯೊಬ್ಬ ಸವಿತಾ ಸಮಾಜದ ಸದಸ್ಯರಿಗೂ ಮಾಸ್ಕ್ ಹಾಗೂ ಸ್ಯಾನಿಟೈಸರ್ ಅನ್ನು ಉಚಿತವಾಗಿ ಸಮಾಜದ ಮುಖಂಡರಾದ ವಕೀಲ ಪ್ರಕಾಶ್ ನೀಡಿದರು.
ಈ ವೇಳೆ ಚಿಕ್ಕಮಗಳೂರು ತಾಲೂಕು ಸವಿತಾ ಸಮಾಜ ಘಟಕದ ಅಧ್ಯಕ್ಷರಾದ ಸಿ.ವೆಂಕಟೇಶ್, ಕಾರ್ಯದರ್ಶಿ ಯಶ್ವಿನ್, ಖಜಾಂಚಿ ಸಿ.ಎಂ ಯೋಗೀಶ್, ಬಿ. ಭರತ್, ಎನ್. ಗರೀಶ್, ಕಾಂತ, ಮುಂತಾದವರು ಸ್ವಯಂ ಸೇವಕರಾಗಿ ಸವಿತಾ ಸಮಾಜದ ಸದಸ್ಯರು ಲಸಿಕೆ ಪಡೆಯಲು ಸಹಕರಿಸಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g