May 5, 2024

MALNAD TV

HEART OF COFFEE CITY

ಗೋ ಬ್ಯಾಕ್ ಶೋಭಾ ಒಂದು ಸ್ಪೋನ್ಸರ್ಡ್ ಕಾರ್ಯಕ್ರಮ: ಶೋಭಾ ಕರಂದ್ಲಾಜೆ

1 min read

ಚಿಕ್ಕಮಗಳೂರು: ಗೋ ಬ್ಯಾಕ್ ಶೋಭಾ ಒಂದು ಸ್ಪೋನ್ಸರ್ಡ್ ಕಾರ್ಯಕ್ರಮವಾಗಿದ್ದು ಒಬ್ಬರ ತೇಜೋವಧೆ, ಅವಮಾನ ಮಾಡಿ ಆಕಾಂಕ್ಷಿಗಳು ಟಿಕೆಟ್ ಕೇಳಬಾರದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಲೋಕಸಭಾ ಚುನಾವಣೆ ಬಿಜೆಪಿ ಟಿಕೆಟ್ ರೇಸ್ ನಲ್ಲಿರುವ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಶೋಭಾ ಮಾಡುತ್ತಿರುವವರ ಮೇಲೆ ಸಂಸದೆ ಶೋಭಾ ಬಹಿರಂಗ ಸವಾಲು ಎಸೆದಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆಯಾಗಲಿ ಗೋ ಬ್ಯಾಕ್ ಪತ್ರ ಬರೆದಿರುವವರು ನಿಜವಾದ ಬಿಜೆಪಿ ಕಾರ್ಯಕರ್ತರಾ ಎಂದು ಪ್ರಶ್ನಿಸಿರುವ ಅವರು ನಿಷ್ಠಾವಂತ ಕಾರ್ಯಕರ್ತರು ಹೀಗೆ ಮಾಡುವುದಿಲ್ಲ ಎನ್ನುತ್ತಾ ಪರೋಕ್ಷವಾಗಿ ವಿರೋಧ ಪಕ್ಷದ ಕೈವಾಡ ಇರಬಹುದು ಎಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಟಿಕೆಟ್ ಕೇಳಲು ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಇದೆ, ಆದರೆ ಇನ್ನೊಬ್ಬರ ತೇಜೋವಧೆ ಮಾಡಿ ಅಪಮಾನಿಸಿ ಅನವಶ್ಯಕ ಅಪಪ್ರಚಾರ ಮಾಡಿ ಟಿಕೆಟ್ ಕೇಳಬಾರದು ಎಂದಿದ್ದಾರೆ. ಇದನ್ನೆಲ್ಲಾ ಜನರು ಮತ್ತು ಹೈಕಮಾಂಡ್ ಗಮನಿಸುತ್ತಿದ್ದು, ಇದಕ್ಕೆಲ್ಲ ಉತ್ತರ ಯಾರು ಕೊಡಬೇಕೋ ಅವರೇ ಕೊಡುತ್ತಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಗೋ ಬ್ಯಾಕ್ ಕಳೆದ ಬಾರಿಯೂ ನಡೆದಿತ್ತು ರಾಜಕಾರಣದಲ್ಲಿ ಇದೆಲ್ಲ ಇರುವಂತದ್ದೆ ರಾಜಕೀಯಕ್ಕೆ ಬಂದ ಮೇಲೆ ಫೇಸ್ ಮಾಡಬೇಕು ಎನ್ನುತ್ತಾ ಗೋಡೆಗೆ ಬಾಲ್ ಹೊಡೆದಷ್ಟು ನಮ್ಮ ಕೈ ಗಟ್ಟಿಯಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!