ಡಿಸೆಂಬರ್ 26 ರಿಂದ 28 ರವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಯವರ ಸುವರ್ಣ ಪಟ್ಟಾಭಿಷೇಕ
1 min readಚಿಕ್ಕಮಗಳೂರು: ಬಾಲಗಂಗಾಧರನಾಥ ಸ್ವಾಮೀಜಿ ಯವರ ಪಟ್ಟಾಭಿಷೇಕವಾಗಿ 50 ವರ್ಷಗಳು ತುಂಬಿದ ಹಿನ್ನೆಲೆ ಇದೇ ಡಿಸೆಂಬರ್ 26 ರಿಂದ ಮೂರು ದಿನಗಳ ಕಾಲ ಶೃಂಗೇರಿ ಆದಿ ಚುಂಚನಗಿರಿ ಮಠದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಸಿ.ಟಿ ಜಯದೇವ ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ಅವರು, ಆದಿಚುಂಚನಗಿರಿ ಮಹಾಸಂಸ್ಥಾನದ 71 ನೇ ಮಠಾಧೀಶರಾದ ಜಗದ್ಗುರು ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರು ಪಟ್ಟಾಭಿಷಕ್ತರಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 26 ರಿಂದ 28 ರವರೆಗೆ ಸುವರ್ಣ ಸಂಪದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಗೋವಾ ಸಿ.ಎಂ ಪ್ರಮೋದ್ ಸಾವಂತ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಮೂರು ದಿನಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಹಾಗೂ ಪ್ರಸ್ತುತ ಪೀಠಾಧ್ಯಕ್ಷರಾದ ಬಾಲಗಂಗಾಧರನಾಥ ಸ್ವಾಮೀಜಿ ಯವರ ಪೀಠಾಧ್ಯಕ್ಚರಾಗಿ ಹತ್ತು ವರ್ಷ ಕಳೆದ ಹಿನ್ನೆಲೆ ದಶಮಾನೋತ್ಸವ ಅಂಗವಾಗಿ ಅವರ ಪಾದಗಳಿಗೆ ಚಿನ್ನದ ಪುಷ್ಪ ಅರ್ಪಣೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಟಿ. ರಾಜಶೇಖರ್ ತಿಳಿಸಿದರು. ಸತ್ಸಂಗ, ಚುಂಚೋತ್ಸವ, ಗುರುವಂದನೆ ಬಾಲಗಂಗಾಧರನಾಥ ಸ್ವಾಮೀಜಿ ಯವರ ಭಕ್ತಿಗೀತೆಗಳ ಧ್ವನಿ ಸುರುಳಿ ಬಿಡುಗಡೆ , ಪ್ರತಿಭಾ ಪುರಸ್ಕಾರ, ಡಾ ಶಮಿತ ಮಲ್ನಾಡ್ ಸಂಗೀತ ಮತ್ತು ರಸ ಸಂಜೆ ಸಹಾ ನಡೆಯಲಿದೆ ಎಂದು ಒಕ್ಕಲಿಗರ ಸಂಘದ ಕಾರ್ಯದರ್ಶಿ ಮಾಡ್ಲ ಪ್ರಕಾಶ್ ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g