April 29, 2024

MALNAD TV

HEART OF COFFEE CITY

ಆರ್ಮಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

1 min read

ಚಿಕ್ಕಮಗಳೂರು: ಆರ್ಮಿಗೆ ಸೇರುವ ಮಹದಾಸೆ ಹೊಂದಿದ್ದ ಯುವಕನೋರ್ವ ಭೂ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಯಡದಾಳು ಗ್ರಾಮದಲ್ಲಿ ನಡೆದಿದೆ.

ಭೂ ಸೇನೆಗೆ ಸೇರಬೇಕೆಂದು 2-3 ವರ್ಷಗಳಿಂದ ತಯಾರಿ ನಡೆಸಿ ಆ ಸಂಬಂಧ ಬರೆದ ಲಿಖಿತ ಪರೀಕ್ಷೆಯಲ್ಲಿ ಫೇಲ್ ಆದ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದ ಕಾರ್ತಿಕ್ ಎಂಬ 22 ವರ್ಷದ ಯುವಕ ಆರ್ಮಿ ಸೇರಲು ನಿರಂತರ ಪ್ರಯತ್ನ ಮಾಡುತ್ತಿದ್ದ ಆದರೆ ಕಳೆದ ವಾರ ಬರೆದ ಪರೀಕ್ಷೆಯಲ್ಲಿ ಅನುತ್ತೀರ್ಣ ನಾಗಿದ್ದಾನೆ. ಇದರಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಡೆತ್ ನೋಟ್ ಬರೆದಿಟ್ಟಿರುವ ಕಾರ್ತಿಕ್ ನನ್ನ ತಂದೆ ತಾಯಿಗೆ ಉತ್ತರ ಹೇಳುವ ಧೈರ್ಯ ನನಗೆ ಇಲ್ಲ ಎಂದು ಹೇಳಿದ್ದಾನೆ. ಸೇನಾ ನೇಮಕಾತಿ ಬಗ್ಗೆಯೂ ಡೆತ್ ನೋಟ್ ನಲ್ಲಿ ಬರೆಯಲಾಗಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!