May 3, 2024

MALNAD TV

HEART OF COFFEE CITY

ಮಲೆನಾಡಲ್ಲಿ ಮಳೆ-ಗಾಳಿ ಅಬ್ಬರ, ಧರೆಗುರುಳಿದ ಬೃಹತ್ ಬೀಟೆ ಮರ, ಸ್ಥಳಿಯರಿಂದ‌ ತೆರವು

1 min read

ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಳೆ-ಗಾಳಿ ಅಬ್ಬರ ಹೆಚ್ಚುತ್ತಿದ್ದು ಭಾರೀ ಗಾಳಿಗೆ ಬೃಹತ್ ಮರಗಳು ಧರೆಗುರುಳುತ್ತಿವೆ. ಜಿಲ್ಲೆಯ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭಾರೀ ಗಾಳಿಗೆ ನೂರಾರು ವರ್ಷದ ಬೃಹತ್ ಬೀಟೆ ಮರ ಧರೆಗುರುಳಿದ್ದು, ಸುಮಾರು 2 ಗಂಟೆಗಳ ಕಾಲ ಕಳಸ ಹಾಗೂ ಚನ್ನಹಡ್ಲು ಗ್ರಾಮದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿತ್ತು. ಬಳಿಕ ಸುರಿಯೋ ಮಳೆ ಮಧ್ಯೆ ಚನ್ನಹಡ್ಲು ಜನ ಮರವನ್ನ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಂಡಿದ್ದಾರೆ. ಸ್ಥಳೀಯರು ಮರವನ್ನ ತೆರವುಗೊಳಿಸುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳೀಯರ ಜೊತೆ ಸೇರಿ ಮರವನ್ನ ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇನ್ನು ಕಳಸ ತಾಲೂಕಿನ ಕಲ್ಮಕ್ಕಿ ಎಂಬ ಗ್ರಾಮದ ಬಳಿ ಮನೆ ನಿರ್ಮಾಣದ ಕಾಮಗಾರಿಗೆ ಎಂ.ಸ್ಯಾಂಡ್ ಮರಳನ್ನ ಕೊಂಡೊಯ್ಯುತ್ತಿದ್ದ ಟಿಪ್ಪರ್ ಲಾರಿ ಚಾಲಕನಾ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

 

ಅದೃಷ್ಟವಶಾತ್ ಟಿಪ್ಪರ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಲಾರಿ ಪಲ್ಟಿ ಆಗುತ್ತಿದ್ದಂತೆ ಸ್ಥಳೀಯರು ಚಾಲಕ ಹಾಗೂ ಕ್ಲೀನರ್ ನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.‌ ಮಲೆನಾಡಿನಾದ್ಯಂತ ಕಳೆದೊಂದು ವಾರದಿಂದಲೂ ಕೂಡ ಮೋಡ ಕಡುಗಟ್ಟುತ್ತಿದ್ದು ಇಡೀ ದಿನ ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಬಿಸುತ್ತಿರುವ ರಣ ಗಾಳಿಯಿಂದ ಮರಗಳು ಮುರಿದು ಬೀಳುತ್ತಿದ್ದು ಮಲೆನಾಡಿನ ಕುಗ್ರಾಮಗಳಲ್ಲಿ ಅಲ್ಲಲ್ಲೇ ರಸ್ತೆ ಸಂಚಾರ ಅಸ್ತವ್ಯಸ್ತ ಗೊಳ್ಳುತ್ತಿದ್ದು, ಮರಗಿಡಗಳು ವಿದ್ಯುತ್ ಅಂತಿಗಳ ಮೇಲೆ ಬಿದ್ದ ಪರಿಣಾಮ ಹಳ್ಳಿಗಳು ಕತ್ತಲಲ್ಲಿ ಬದುಕುವ ಸ್ಥಿತಿಯು ನಿರ್ಮಾಣವಾಗಿದೆ.‌

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!