ಕಾಫಿನಾಡಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
1 min read
ಚಿಕ್ಕಮಗಳೂರು : ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಒಂದೂವರೆ ತಿಂಗಳಿಂದಲೂ ಮಳೆರಾಯ ಬಿಡುವು ನೀಡಿದ್ದ. ಮಲೆನಾಡು ಭಾಗದಲ್ಲಿ ಅಲ್ಲಲ್ಲೇ ಸಾಧಾರಣ ಮಳೆ ಸುರಿದದ್ದು ಬಿಟ್ಟರೇ ಹೆಚ್ಚೇನು ಮಳೆಯಾಗಿರಲಿಲ್ಲ. ಎನ್.ಆರ್.ಪುರ ಭಾಗದಲ್ಲಿ ಎರಡು ಜೋರು ಮಳೆಯಾಗಿತ್ತು. ಆದರೆ, ಇಂದು ಬೆಳಗ್ಗಿನ ಜಾವದಿಂದ ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಬೆಳ್ಳಬೆಳಗ್ಗೆಯೇ ಜೋರು ಮಳೆ ಸುರಿದ ಪರಿಣಾಮ ಜನಜೀವನ ಕೂಡ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಮಳೆಯಲ್ಲಿ ಸಿಲುಕಿ ಪರದಾಡಿದ್ದಾರೆ. ಕೊಪ್ಪ ತಾಲೂಕಿನ ಜಯಪುರ ಹಾಗೂ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಭಾರೀ ಮಳೆ ಸುರಿದಿದ್ದು ಮಳೆ ನೀರು ರಸ್ತೆಯಲ್ಲಿ ಹರಿದಿದೆ. ಮೂರು ಗಂಟೆ ನಿರಂತರವಾಗಿ ಸುರಿದ ವರುಣದೇವ ತುಸು ಬಿಡುವು ನೀಡಿದರೂ ಅಲ್ಲಲ್ಲೇ ಜಡಿ ಮಳೆ ಸುರಿಯುತ್ತಿದೆ. ಜಿಲ್ಲಾದ್ಯಂತ ಮೋಡ ಕವಿದ ವಾತಾವರಣದ ಜೊತೆ ತಣ್ಣಗೆ ಗಾಳಿ ಬೀಸುತ್ತಿದ್ದು ಮತ್ತೆ ಮಳೆಯಾಗುವ ಸಾಧ್ಯತೆ ಇದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g