May 17, 2024

MALNAD TV

HEART OF COFFEE CITY

ಮೈದುಂಬಿ ಹರಿಯುತ್ತಿರೋ ಭದ್ರೆ, ಮುಳುಗಡೆ ಭೀತಿಯಲ್ಲಿ ಹೆಬ್ಬಾಳೆ ಸೇತುವೆ

1 min read

 

ಚಿಕ್ಕಮಗಳೂರು : ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಭಾಗದಲ್ಲಿ ಕಳೆದ ರಾತ್ರಿ ಸುರಿದಂತಹ ಧಾರಾಕಾರ ಮಳೆಯಿಂದ ಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು ಹೆಬ್ಬಾಳೆ ಸೇತುವೆಗೆ ಮುಳುಗುಡೆ ಭೀತಿ ಆವರಿಸಿದೆ. ಕಳಸ ಹಾಗೂ ಕುದುರೆಮುಖ ಸುತ್ತಮುತ್ತ ನಿನ್ನೆ ರಾತ್ರಿ 11 ಸುಮಾರಿಗೆ ಆರಂಭವಾದ ಮಳೆ ಬೆಳಗ್ಗಿನ ಜಾವದವರೆಗೂ ಒಂದೇ ಸುಮನೆ ಸುರಿದಿದೆ. ಭಾರೀ ಮಳೆಯಿಂದ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಕಳಸ-ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಕೂಡ ಮುಳುಗುವ ಹಂತ ತಲುಪಿದೆ. ಈ ಸೇತುವೆ ಮುಳುಗಿದರೆ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸ ಸಂಪರ್ಕ ಕಡಿತಗೊಳ್ಳಲಿದೆ. ದೇವಸ್ಥಾನಕ್ಕೆ ಹೋಗಲು ಅನ್ಯ ಮಾರ್ಗವಿದ್ದರೂ ಸುಮಾರು 8-10 ಕಿ.ಮೀ. ಸುತ್ತಿಬಳಸಿ ಹೋಗಬೇಕು.

 

ಆ ಮಾರ್ಗವೂ ಕಿರಿದಾದ ರಸ್ತೆಯಾಗಿದ್ದು, ದೊಡ್ಡ ವಾಹನಗಳ ಸಂಚಾರ ಕಷ್ಟದಾಯಕವಾಗಿದೆ. ಈ ಸೇತುವೆಯನ್ನ ಎತ್ತರಿಸಿ ಕೊಡಿ ಎಂದು ಸ್ಥಳಿಯರು ಹತ್ತಾರು ವರ್ಷಗಳಿಂದ ಮನವಿ ಮಾಡಿದರೂ ಸರ್ಕಾರ, ಅಧಿಕಾರಿಗಳು ಯಾರೂ ಸೂಕ್ತವಾಗಿ ಸ್ಪಂದಿಸಿಲ್ಲ. ಪ್ರತಿ ಮಳೆಗಾಲದಲ್ಲೂ ಈ ಸೇತುವೆ ಮುಳುಗಿ ಜನಸಾಮಾನ್ಯರು ತೀವ್ರ ಸಂಕರ್ಷ ಅನುಭವಿಸುತ್ತಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!