April 29, 2024

MALNAD TV

HEART OF COFFEE CITY

ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಹಿಂಡು: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

1 min read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ವಿಪರೀತಗೊಳ್ಳುತ್ತಿರುವ ಬೆನ್ನಲ್ಲೆ ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಹಿಂಡು ಗೋಚರಿಸಿವೆ. ಆದರೆ ಈ ಬಾರಿ ಯಾವುದೇ ಹಾನಿ ಮಾಡಿಲ್ಲ, ಬದಲಾಗಿ ಹಿನ್ನೀರಿನಲ್ಲಿ ಜಲಕ್ರೀಡೆಯಲ್ಲಿ ತಲ್ಲೀನವಾಗಿವೆ.

ಎನ್.ಆರ್.ಪುರ ತಾಲೂಕಿನ ಕುಸುಬೂರು ಗ್ರಾಮದಲ್ಲಿ ಕೆರೆಯಲ್ಲಿ ಬೀಡುಬಿಟ್ಟಿರುವ 12 ಕಾಡಾನೆಗಳ ಹಿಂಡು ಜಲಕ್ರೀಡೆಯಲ್ಲಿ ತೊಡಗಿವೆ, ತನ್ನ ಮರಿಗಳ ಜೊತೆ ಕೆರೆ ನೀರಲ್ಲಿ ಈಜಾಡುತ್ತಾ, ಕಾಲ ಕಾಡಾನೆಗಳ ಹಿಂಡು ಇರುವ ದೃಶ್ಯ ದಾರಿಹೋಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಗ್ರಾಮದ ಕೆರೆಯಲ್ಲಿ ಕಾಡಾನೆಗಳ ಕಂಡು ಸ್ಥಳೀಯ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಕೊಪ್ಪ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳು ನರಸಿಂಹರಾಜಪುರದ ಭದ್ರಾ ಹಿನ್ನೀರಿನ ಕುಸುಬೂರು, ಮುತ್ತಿನಕೊಪ್ಪ, ಸಾತ್ಕೋಳ, ಮುಂಡುಗೋಡು ಸೇರಿದಂತೆ ಹತ್ತಾರು ಹಳ್ಳಿಯ ಜನರಲ್ಲಿ ಆತಂಕ ಮೂಡಿಸಿವೆ. ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಡಾನೆ ಭೀತಿ ನಡುವೆ ಅರಣ್ಯ ಪ್ರದೇಶದಿಂದ ಕಾಡಂಚಿನ ಗ್ರಾಮಗಳಿಗೆ ಆಗಮಿಸುತ್ತಿರುವ ಕಾಡಾನೆಗಳ ಹಿಂಡು ಭೀತಿಯನ್ನು ಮತ್ತಷ್ಟು ಹೆಚ್ಚಿಸಿವೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!