April 29, 2024

MALNAD TV

HEART OF COFFEE CITY

ಹಿಜಾಬ್ ರೀತಿ ಹೇಳಿಕೆ ಇಂದಲೇ ನಿಮ್ಮನ್ನು ಸಿದ್ರಾಮುಲ್ಲಾ ಖಾನ್ ಅನ್ನೊದು: ಕಲ್ಮರಡಪ್ಪ ಟೀಕೆ

1 min read

ಚಿಕ್ಕಮಗಳೂರು: ಹಿಜಾಬ್ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆಯುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮರಡಪ್ಪ ಟೀಕಿಸಿದ್ದಾರೆ. 

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೋಮು ಭಾವನೆ ಕೆರಳಿಸುವ ಇಂತಹ ನಿರ್ಣಯ ತೆಗೆದುಕೊಂಡು ಅರಬ್ ದೇಶಗಳ ರೀತಿಯಲ್ಲಿ ಸ್ತ್ರೀ ಸ್ವಾತಂತ್ರ್ಯ ಹರಣಕ್ಕೆ ಮುಂದಾಗಿದ್ದಾರೆ.ಹಿಜಾಬ್ ಮರುಜಾರಿ ನಿರ್ಣಯದ ಮೂಲಕ ಒಬ್ಬ ಕೋಮುವಾದಿ ಮುಖ್ಯಮಂತ್ರಿ ಪಡೆದಿರುವುದು ನಮ್ಮ ದೌರ್ಭಾಗ್ಯ ಎಂದು ಆರೋಪಿಸಿದರು.  ಓರ್ವ ವಕೀಲರಾಗಿ ನ್ಯಾಯಾಲಯದಲ್ಲಿರುವ ವಿಷಯವನ್ನು ಮಾತನಾಡುವುದು ತಪ್ಪು ಎಂಬುದು ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಮುಂಬರುವ ಲೋಕಸಭಾ ಚುನಾವಣಾ ಗಿಮಿಕ್ ಆಗಿ ಮತ ಬ್ಯಾಂಕ್ ಗಾಗಿ ಈ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಮುಸ್ಲಿಮರನ್ನು ಹಿಂದೂಗಳಿಂದ ಬೇರ್ಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಶಾಲಾ ಕಾಲೇಜುಗಳಲ್ಲಿ ಬಗೆ ಬಗೆಯ ವಸ್ತ್ರಗಳನ್ನು ಹಾಕಿಕೊಂಡು ಬಂದರೆ ಕೋಮು ಭಾವನೆ ಕೆರಳಿಸಿದಂತಾಗುತ್ತದೆ ಎಂದಿರುವ ಕಲ್ಮರಡಪ್ಪ ಇಂತಹ ನಿರ್ಣಯವನ್ನು ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!