ಹಿರೇಕೊಳಲೆ ಗ್ರಾಮಪಂಚಾಯಿತಿ ಅಧ್ಯಕ್ಷೆಯಾಗಿ ಕವಿತಾಸುನೀಲ್ ಉಪಾಧ್ಯಕ್ಷರಾಗಿ ಪುಷ್ವಪಳಿನಿ ಆಯ್ಕೆ
1 min readಚಿಕ್ಕಮಗಳೂರು-ತಾಲ್ಲೂಕಿನ ಹಿರೇಕೊಳಲೆ ಗ್ರಾಮಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಕವಿತಾ ಸುನೀಲ್ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ಪುಷ್ವಪಳಿನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ರಾಮನಗೌಡ ಪಾಟೀಲ್ ತಿಳಿಸಿದರು.ಹಿರೆಕೋಳಲೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಕವಿತಾ ಸುನೀಲ್ ಮಾತನಾಡಿ ಗ್ರಾಮದ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಸದಸ್ಯರು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಉತ್ತಮ ಕಾರ್ಯವನ್ನು ಕೈಗೊಳ್ಳುವ ಮೂಲಕ ಮಾದರಿ ಪಂಚಾಯಿತಿಯನ್ನಾಗಿಸುವಂತೆ ತಿಳಿಸಿದರು.
ಗ್ರಾಪಂ ಅಧ್ಯಕ್ಷರನ್ನಾಗಿ ಎರಡನೇಬಾರಿಗೆ ಮರು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಧನ್ಯವಾದಗಳನ್ನು ತಿಳಿಸಿದ ಅವರು ಈ ಹಿಂದೆ ಸ್ವಚ್ಚತೆಗೆ ಆದ್ಯತೆ ನೀಡುವುದರ ಜತೆಗೆ ಕುಡಿಯುವ ನೀರು ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಮಾಡಿಕೊಂಡು ಬರಲಾಗಿದೆ, ಮುಂದಿನ ದಿನಗಳಲ್ಲಿ ಹಕ್ಕು ಪತ್ರಗಳು ಇಲ್ಲದವರಿಗೂ ಹಕ್ಕುಪತ್ರ ನೀಡಲಾಗುªವುದು ಹಾಗೂ ಗ್ರಾಮದ ಅಭಿವೃದ್ಧಿ ಕೆಲಸವನ್ನು ಮಾಡುತ್ತೇನೆ ಎಂದರು.
ಈ ಭಾಗದಲ್ಲಿ ಮುಖ್ಯವಾಗಿ ಒತ್ತುವರಿಯಿಂದಾಗಿ ನಿವೇಶನ ಸಮಸ್ಯೆ ಕಾಡುತ್ತಿದೆ. ಅದನ್ನು ಬಗೆಹರಿಸಿ ನಿವೇಶನ ಕಲ್ಪಿಸಿಕೊಡುತ್ತೇನೆ ಎಂದರು.
ಹಿರೆಕೋಳಲೆ ಗ್ರಾಮ ಪಂಚಾಯಿತಿ ಸದಸ್ಯ ಹೆಚ್.ಎನ್.ಶಿವಕುಮಾರ್ ಮಾತನಾಡಿ ಗ್ರಾಮ ಪಂಚಾಯಿತಿ ಎಂಟು ಜನ ಸದಸ್ಯರನ್ನು ಒಳಗೊಂಡಿದ್ದು, ಪಕ್ಷಬೇದವನ್ನು ಮರೆತು ಊರಿನ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗೂಡಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರು ಹಿರೆಕೊಳಲೆ ಗ್ರಾಪಂ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಹೆಚ್.ಪೂರ್ಣೇಶ್, ರೇಣುಕಾ, ಸಂದೀಪ್, ಸಿ.ಪಿ.ವಿನಯ್, ಪೂರ್ಣಿಮಾ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಮೇಶ್, ಅಲ್ಲಂಪುರ ಮಾಜಿ ಗ್ರಾಪಂ ಅಧ್ಯಕ್ಷ ರಮೇಶ್, ಪಿಡಿಓ ವಿಜಯ, ಕಾರ್ಯದರ್ಶಿ ಸಂದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g