May 21, 2024

MALNAD TV

HEART OF COFFEE CITY

ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷದಿಂದ ಆಸ್ಪತ್ರೆ ಆವರಣವೆಲ್ಲ ಕಸದ ರಾಶಿ

1 min read

ಚಿಕ್ಕಮಗಳೂರು : ಸರ್ಕಾರಿ ಜಿಲ್ಲಾಸ್ಪತ್ರೆಯ ಸುತ್ತಮುತ್ತಲ ಆವರಣವನ್ನು ಸ್ವಚ್ಚವಾಗಿಟ್ಟುಕೊಳ್ಳವಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಮೈ ಮರೆತಿರುವಂತೆ ಕಾಣುತ್ತಿದೆ. ಆಸ್ಪತ್ರೆಯ ಸಿಬ್ಬಂದಿಗಳ ಈ ನಿರ್ಲಕ್ಷ್ಯಕ್ಕೆ ಕೊರೊನಾ ಸೋಂಕಿತರು ಹಾಗೂ ಅವರ ಸಂಬಂಧಿಕರು ಬೇಸತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಪಿಪಿಇ ಕಿಟ್ ಸೇರಿದಂತೆ ಆಸ್ಪತ್ರೆಯ ತ್ಯಾಜದ ರಾಶಿಯನ್ನು ಐಸಿಯೂ ವಾರ್ಡ್ ಪಕ್ಕದಲ್ಲೇ ಕಸದ ರಾಶಿ ಹಾಕುತ್ತಿದ್ದಾರೆ. ಇದು ಕೊಳೆತು ಆಸ್ಪತ್ರೆಯ ವಾರ್ಡ್ಗಳೆಲ್ಲ ಗಬ್ಬೆದ್ದು ನಾರುತ್ತಿದೆ. ಕೊರೋನ ಸೋಂಕಿನಿಂದ ಒಳ ರೋಗಿಗಳು ಹಾಗೂ ಸಂಬಂಧಿಕರು ಹೈರಾಣಾಗುತ್ತಿದ್ದರೆ, ಕಸದ ರಾಶಿಯಿಂದ ಹೊರ ಹೊಮ್ಮುವ ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ನರಕ ಅನುಭವಿಸುವಂತಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿರುವ ಸಿಬ್ಬಂದಿಗಳು ತಮ್ಮ ಅನ್ನಕ್ಕೆ ಆಧಾರವಾಗಿರುವ ಆಸ್ಪತ್ರೆಯ ಆವರಣವನ್ನು ಸ್ವಚ್ಚವಾಗಿಟ್ಟುಕೊಳ್ಳುವಲ್ಲಿ ಬೇಜವಾಬ್ದಾರಿ ತನವನ್ನು ತೋರುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯೆಂದರೆ ಮೂಗು ಮುರಿಯುವ ಸಾರ್ವಜನಿಕರು, ವಿಧಿಯಿಲ್ಲದೆ ಕೊರೋನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಾದರೂ ಆಸ್ಪತ್ರೆಯ ಆವರಣವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮನೆಯಲ್ಲೇ ಇರಿ! ಸುರಕ್ಷಿತವಾಗಿರಿ!

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!