ಮನೆ ಕುಸಿದು ಕುಟುಂಬಸ್ಥರು ಪಾರು: ಭತ್ತದ ಗದ್ದೆ ಜಲಾವೃತ ರೈತ ಕಂಗಾಲು
1 min readಚಿಕ್ಕಮಗಳೂರು : ಮಲೆನಾಡ ಭಾಗದಲ್ಲಿ ಮಳೆ ಮುಂದುವರೆದೆ ಭಾರೀ ಮಳೆಗೆ ಚಿಕ್ಕಮಗಳೂರು ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಬಾಳೆಹಳ್ಳಿ ಗ್ರಾಮದ ನಿವಾಸಿ ಜಯರಾಂ ಎಂಬುವರ ಮನೆ ಕುಸಿದಿದ್ದು. ನಿನ್ನೆ ಸಂಜೆ 7 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು. ಮನೆಯಿಂದ ಹೊರಗೆ ಓಡಿ ಜಯರಾಂ , ಹಾಗೂ ಪತ್ನಿ , ಮಗ ಪ್ರಾಣ ಉಳಿಸಿಕೊಂಡಿದ್ದಾರೆ. ಮನೆ ಕಳೆದುಕೊಂಡ ಜಯರಾಂ ಕುಟುಂಬ ಕಂಗಾಲಾಗಿದೆ.
ಅತ್ತ ಮೂಡಿಗೆರೆ ತಾಲೂಕಿನ ಊರುಬಗೆ ಯು-ಹೊಸಹಳ್ಳಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಅಲ್ಲದೆ ಭಾರಿ ಮಳೆಯಿಂದ ನಾಟಿ ಮಾಡಿದ್ದ ಗದ್ದೆಗಳು ಸಂಪೂರ್ಣ ಜಲಾವೃತವಾಗಿ ಬೆಳೆ ನೀರುಪಾಲಾಗಿ ರೈತರು ಕಂಗಾಲಾಗಿದ್ದಾರೆ.. ಸತತ ಮಳೆಯಿಂದ ಮೂಡಿಗೆರೆ ಭಾಗದ ಜನಜೀವನ ಸಂಪೂರ್ಣ ಅಸ್ತವ್ಯಸ್ತ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g