ವಿವಿಧ ಭೇಡಿಕೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ : ಹೋರಾಟಗಾರರ ಬಂಧನ
1 min readಸಖರಾಯಪಟ್ಟಣ : ವಿವಿಧ ಬೇಡಿಕೆಗೆ ಒತ್ತಾಯಿಸಿ ಸಖರಾಯಪಟ್ಟಣದಲ್ಲಿ ಮಾಜಿ ಜಿಲ್ಲಾಪಂಚಾಯಿತಿ ಸದಸ್ಯ ಹಳೇಹಟ್ಟಿ ಆನಂದ ನೇತೃತ್ವದಲ್ಲಿ ಬಸ್ ನಿಲ್ದಾಣದ ಎದುರು ಉಪವಾಸ ಸತ್ಯಾಗ್ರಹದ ವೇಳೆ ಹೋರಾಟಗಾರರ ಪೊಲೀಸರು ಬಂಧಿಸಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರ, ಅಗ್ನಿ ಶಾಮಕ ಠಾಣೆ, ತೋಟಗಾರಿಕೆ ಇಲಾಖೆ ಕಚೇರಿ, ಹಕ್ಕು ಪತ್ರ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಯಿತ್ತು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಳೇಹಟ್ಟಿ ಆನಂದ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಆರಂಭವಾಗುತ್ತಿದಂತೆ. ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಪೊಲೀಸರು ಹೋರಾಟಗಾರರನ್ನ ಬಂಧಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಬೋಜೇಗೌಡ, ಫೈರೋಜ್ ಖಾನ್ , ಮೋಹನ್ ಗೌಡ, ಚೇತನ್ ಗೌಡ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g