ಹೋಂಸ್ಟೇನಲ್ಲಿ ನವವಿವಾಹಿತೆ ಸಾವು, ಗ್ಯಾಸ್ ಗೀಸರ್ ಕಾರಣ ಎಂದು ಪತಿ ಆರೋಪ
1 min readಎರಡು ತಿಂಗಳ ಹಿಂದಷ್ಟೆ ವಿವಾಹವಾಗಿದ್ದ ನವವಧು ಹೋಂ ಸ್ಟೇನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಮೃತಳನ್ನ ಅಜ್ಜಂಪುರ ತಾಲೂಕಿನ ಗೆಜ್ಜೆಗೊಂಡನಹಳ್ಳಿ ಮೂಲದ ವನಿತಾ ಎಂದು ಗುರುತಿಸಲಾಗಿದೆ. ಮೃತ ವನಿತಾಗೆ ಕಳೆದ ಎರಡು ತಿಂಗಳ ಹಿಂದಷ್ಟೆ ತುಮಕೂರು ಮೂಲದ ಹರ್ಷಿತ್ ಎಂಬ ಯುವಕನೊಂದಿಗೆ ಮದುವೆಯಾಗಿತ್ತು.
ಮದುವೆ ಬಳಿಕ ತಾಲೂಕಿನ ಲಕ್ಷ್ಮೀಪುರ ಸಮೀಪದ ಹೋಂ ಸ್ಟೇವೊಂದರಲ್ಲಿ ತಂಗಿದ್ದರು. ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಭೇಟಿ ನೀಡಿ ಬಂದಿದ್ದ ನವ ದಂಪತಿ ಹೋಂ ಸ್ಟೇನಲ್ಲಿ ತಂಗಿದ್ದರು. ಮರು ದಿನ ಸ್ನಾನಕ್ಕೆ ಹೋದ ವನಿತಾ ಬಹಳ ಹೊತ್ತಾದರೂ ಹೊರಬರಲಿಲ್ಲ. ಪತಿ ಹರ್ಷಿತ್ ಕೂಗಿದರೂ ಯಾವುದೇ ರೀತಿಯ ಪ್ರತಿಕ್ರಿಯೇ ಬಾರದ ಹಿನ್ನೆಲೆ ಬಾಗಿಲು ಓಡೆದು ನೋಡಿದಾಗ ವನಿತಾ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ. ಕೂಡಲೇ ಅವರನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ. ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ಕರೆದೊಯ್ದಿದ್ದರು. ಆದರೆ, ತೀವ್ರ ಅಸ್ವಸ್ಥರಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ, ಹೋಂ ಸ್ಟೇನ ಸ್ನಾನದ ಕೋಣೆಯಲ್ಲಿ ಗ್ಯಾಸ್ ಗೀಸರನ್ನ ವ್ಯವಸ್ಥಿತವಾಗಿ ನಿರ್ವಹಿಸದೆ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪತಿ ಹರ್ಷಿತ್ ಹೋಂಸ್ಟೇಗಳ ವಿರುದ್ಧ ಆಕ್ರೋಶ ಹೊರಹಾಕಿ, ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಕೆಲ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು ಪ್ರಕರಣ ದಾಖಲಿಸಿಕೊಂಡಿರೋ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರವಾಸೋಧ್ಯಮ ಜಿಲ್ಲೆಯ ಕಾಫಿನಾಡಲ್ಲಿ ಇಂತಹಾ ಪ್ರಕರಣ ಇದೇ ಮೊದಲು ಎಂದು ಹೇಳಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g