April 30, 2024

MALNAD TV

HEART OF COFFEE CITY

ಅನಾರೋಗ್ಯದಿಂದ ಸಾವನಪ್ಪಿದ ಪತಿ – ಪತಿಯ ಸಾವಿನಲ್ಲೂ ಒಂದಾದ ಪತ್ನಿ

1 min read

ಚಿಕ್ಕಮಗಳೂರು : ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ. ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಹರೀಶ್ ಅವರನ್ನು ನಗರದ ಕೆ ಆರ್ ಎಸ್ ಆಸ್ಪತ್ರೆಗೆ ಸೋಮವಾರ ಮಧ್ಯಾಹ್ನ  ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಆಕ್ಸಿಜನ್ ನೀಡಿದ್ದು, ಆಕ್ಸಿಜನ್ ಖಾಲಿಯಾಗಿದ್ದರಿಂದ ವೈದ್ಯರು ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದರು. ಆ ಬಳಿಕ ಕುಟುಂಬಸ್ಥರು ಹರೀಶ್ ಅವರನ್ನು ನಗರದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಇನ್ನೂ ತಂದೆ ಹರೀಶ್ ಮೃತಪಟ್ಟ ಸುದ್ದಿಯನ್ನು ಪಿಯುಸಿ ಓದುತ್ತಿರುವ ಮಗ ತಾಯಿಗೆ ಮೊಬೈಲ್ ಮೂಲಕ ಕರೆ ಮಾಡಿ ತಿಳಿಸಿದ್ದಾರೆ. ಪತಿ ಮೃತ ಪಟ್ಟ ಸುದ್ದಿ ಕೇಳಿ ಪತ್ನಿ ಸೌಮ್ಯ  ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಈ ಮೂಲಕ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

ಹರೀಶ್ ಹಾಗೂ ಸೌಮ್ಯಾ ದಂಪತಿಗೆ ಕೋವಿಡ್ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಪ್ಪ-ಅಮ್ಮನನ್ನು ಕಳೆದುಕೊಂಡ ಮಗನ ದುಃಖ ಮುಗಿಲುಮುಟ್ಟಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!