ತಿರುಪತಿ ಲಡ್ಡುವಿನಲ್ಲಿ ನಮ್ಮ ತುಪ್ಪ ಇರುತ್ತೆ ಅನ್ನೋದೆ ಹೆಮ್ಮೆ, ಆದ್ರೀಗ ನೋವಾವಾಗ್ತಿದೆ : ಸಿ.ಟಿ.ರವಿ
1 min read
ಚುನಾವಣೆ ಬಳಿಕ ತಿರುಪತಿಗೆ ರಾಜ್ಯದ ನಂದಿನಿ ತುಪ್ಪ ಸರಬರಾಜು ನಿಲ್ಲಿಸಲಾಗಿದೆ ಎಂದು ಕೇಳಿ ದುಃಖವಾಗಿದೆ. ತಿರುಪತಿ ಪ್ರಸಾದದೊಂದಿಗೆ ನಮ್ಮ ರಾಜ್ಯದ ನಂದಿನಿ ತುಪ್ಪ ಸೇರುತ್ತೆ ಅನ್ನುವುದೇ ಹೆಮ್ಮೆ. ನಮ್ಮ 50 ವರ್ಷದ ವ್ಯವಹಾರಿಕ ಸಂಬಂಧವನ್ನು ಮುಂದುವರಿಸಬೇಕು ಎಂದು ಚಿಕ್ಕಮಗಳೂರು ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಾಲಿನ ದರ, ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಹೋಟೆಲ್ ತಿಂಡಿ ದರ ಒಳಗೊಂಡು ರಾಜ್ಯದಲ್ಲಿ ಏರಿಕೆ ಪರ್ವ ಕಾಣುತ್ತಿದೆ. ಬೆಲೆ ಏರಿಕೆಯ ಬರೇ ಎಳೆಯಿರಿ ಎಂದು ರಾಜ್ಯದ ಜನ ಅಧಿಕಾರ ಕೊಟ್ಟಿಲ್ಲ. ರಾಜ್ಯದ ಜನ ಅಧಿಕಾರ ಕೊಟ್ಟಿದ್ದು ನೀವು ಕೊಟ್ಟ ಗ್ಯಾರಂಟಿ ನಂಬಿ. ಆದರೆ, ಈ ರೀತಿ ಬೆಲೆ ಏರಿಕೆಯ ಬರೇ ಎಳೆಯುತ್ತಾರೆ ಅಂತ ಯಾರು ಊಹಿಸಿರಲಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಚುನಾವಣೆ ವೇಳೆ ಅಮಿತ್ ಶಾ ಹೇಳಿಕೆಯನ್ನ ತಪ್ಪಾಗಿ ವ್ಯಾಪಕ ಪ್ರಚಾರ ಮಾಡಿದ್ದರು. ಅಮುಲ್ ಮತ್ತು ನಂದಿನಿ ತಾಂತ್ರಿಕ ಸಹಕಾರ ಪಡೆದು ಕೆಲಸ ಮಾಡಬೇಕು. ರೈತರಿಗೆ ಸಹಾಯ ಮಾಡುವ ಸದುದ್ದೇಶದಿಂದ ಅಮಿತ್ ಶಾ ಸಲಹೆ ನೀಡಿದ್ದರು. ಆದರೆ, ಇಡೀ ರಾಜ್ಯದಲ್ಲಿ ತಪ್ಪು ಅರ್ಥ ಬರುವ ರೀತಿ ಬಿಂಬಿಸುವ ಕೆಲಸ ಮಾಡಿದ್ದರು ಎಂದರು. ಕಳೆದ 50 ವರ್ಷಗಳಿಂದ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಆಗುತ್ತಿದೆ. ವ್ಯವಹಾರಿಕೆ ದೃಷ್ಠಿಯಿಂದಲೂ ಟಿ.ಟಿ.ಡಿ ನಮ್ಮ ದೊಡ್ಡ ಕಸ್ಟಮರ್ ಅವರನ್ನು ಕಳೆದುಕೊಳ್ಳಬಾರದು. ಕೆ.ಎಂ.ಎಫ್. ಅಧ್ಯಕ್ಷರು, ಸಹಕಾರ ಸಚಿವರು, ಶಾಸಕ ಭೀಮ ನಾಯಕ್ ಪ್ರತಿಷ್ಠೆ ಬಿಟ್ಟು ಟಿಟಿಡಿ ಜೊತೆ ಮಾತನಾಡಬೇಕು. ಟಿ.ಟಿ.ಡಿ ಜೊತೆ ಪ್ರತಿಷ್ಠೆ ಬಿಟ್ಟು ಮಾತನಾಡುವಂತೆ ಸಲಹೆ ನೀಡುತ್ತೇನೆ. ಸಲಹೆ ಸ್ವೀಕಾರ ಮಾಡದಿದ್ರೆ ಹಾಲು ಉತ್ಪಾದಕರಿಗೆ ನಷ್ಟವಾಗುತ್ತೆ ಎಂದಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g