April 28, 2024

MALNAD TV

HEART OF COFFEE CITY

ಉಪಸಭಾಪತಿ ಸ್ಥಾನಕ್ಕೆ ಅಪಚಾರವಾಗದಂತೆ ಕೆಲಸ ಮಾಡುತ್ತೇನೆ ಎಂ.ಕೆ ಪ್ರಾಣೇಶ್

1 min read

ಚಿಕ್ಕಮಗಳೂರು : ವಿಧಾನ ಪರಿಷತ್ ಉಪಸಭಾಪತಿ ಹುದ್ದೆಯನ್ನ ನಾನು ಅಪೇಕ್ಷಿಸಿರಲಿಲ್ಲ. ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ದೊಡ್ಡ ಜವಾಬ್ದಾರಿ ವಹಿಸಿದೆ. ಪಕ್ಷವು ನನ್ನ ಮೇಲೆ ನಂಬಿಕೆ ಹಾಗೂ ಆ ಸ್ಥಾನಕ್ಕೆ ಅಪಚಾರವಾಗದಂತೆ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಪ್ರಾಣೇಶ್, ವಿಧಾನ ಪರಿಷತ್ ಹಾಗೂ ವಿಧಾನಸಭೆ ಎರಡಕ್ಕೂ ಮೊಬೈಲ್ ಅವಶ್ಯಕತೆ ಇರೋದಿಲ್ಲ. ಅಲ್ಲಿ ಜಾಮರ್ ಹಾಕಿರುತ್ತಾರೆ. ಅಲ್ಲಿ ಮೊಬೈಲೆ ಬೇಕು ಅನ್ಸೋದಿಲ್ಲ. ತೆಗೆದುಕೊಂಡು ಹೋದರೆ ಅರ್ಥವೂ ಇರೋದಿಲ್ಲ. ಸದನದೊಳಗೆ ಮೊಬೈಲ್ ಅವಶ್ಯಕತೆ ಇರೋದಿಲ್ಲ. ಈ ಬಗ್ಗೆ ಸಭಾಪತಿ ಹಾಗೂ ವಿಧಾನಸಭೆ ಸಭಾಧ್ಯಕ್ಷರ ಜೊತೆಯೂ ಚರ್ಚೆ ಮಾಡಿ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು. ನಿನ್ನೆ ಕೂಡ ಪರಿಷತ್‍ನಲ್ಲಿ ಅಂತಹದ್ದೊಂದು ಘಟನೆ ನಡೆದಿದೆ. ಇ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳೋದಾಗಿ ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!