April 29, 2024

MALNAD TV

HEART OF COFFEE CITY

ಲೋಕಸಭಾ ಚುನಾವಣೆ ಕಾಂಗ್ರೆಸ್ ಗೆಲ್ಲಲ್ಲ ರಾಜ್ಯದಲ್ಲಿ ಗ್ಯಾರೆಂಟಿಗಳು ಉಳಿಯಲ್ಲ: ಆರ್ ಅಶೋಕ್

1 min read

ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲ್ಲ ರಾಜ್ಯದಲ್ಲಿ ಗ್ಯಾರೆಂಟಿಗಳು ನಿಲ್ಲಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ.

ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ದೇವರಾಜ್ ಶೆಟ್ಟಿ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ದೃಷ್ಟಿಬೊಟ್ಟಿನಂತೆ ಒಂದು ಕ್ಷೇತ್ರ ಗೆದ್ದಿದೆ ಈ ಬಾರಿ ಅದೂ ಗೆಲ್ಲಲ್ಲ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ. ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದ ಅಶೋಕ್ ಕಾಂಗ್ರೆಸ್ ಲೋಕಸಭಾ ಚುನಾವಣೆ ಸೋಲುವ ಮುಂದಾಲೋಚನೆಯಿಂದ ಆ ಪಕ್ಷದ ಮುಖಂಡರು ಗ್ಯಾರೆಂಟಿ ರದ್ದು ಎನ್ನುತ್ತಿದ್ದಾರೆ, ಬಿಜೆಪಿ ಬಿಟ್ಟ ಮುಖಂಡರ ಘರ್ ವಾಪ್ಸಿ ಮುಂದುವರಿಯಲಿದೆ, ಎಲ್ಲರು ಬರುತ್ತಾರೆ, ಬರುವವರಿಗೆ ನಾವು ಸ್ವಾಗತ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಮಾಡಲು ಎಲ್ಲರೂ ಬಿಜೆಪಿ ಗೆ ಬರುತ್ತಾರೆ. ರಾಹುಲ್ ಗಾಂಧಿ ಹೋದಲೆಲ್ಲಾ ಕಾಂಗ್ರೆಸ್ ಖಾಲಿಯಾಗುತ್ತಿದೆ ಎಂದು ಕಿಚಾಯಿಸಿದ ಅಶೋಕ್, ಲೋಕಸಭಾ ಚುನಾವಣೆಗೆ ಮಂಡ್ಯ ಟಿಕೆಟ್ ನಿಖಿಲ್ ಕುಮಾರಸ್ವಾಮಿಗೆ ಎನ್ನುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಆರ್ ಅಶೋಕ್ ಸ್ಪಷ್ಟಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!