ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ದತ್ತಪೀಠ ಸಮಸ್ಯೆಗೆ 6 ತಿಂಗಳಲ್ಲಿ ಪರಿಹಾರ
1 min read
ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ೬ ತಿಂಗಳೊಳಗೆ ಇನಾಂ ದತ್ತಾತ್ರೇಯ ಸ್ವಾಮಿ ಬಾಬಾಬುಡನ್ ಗಿರಿ ದರ್ಗಾ ಹಾಗೂ ದತ್ತಪೀಠದ ಸಮಸ್ಯೆಯನ್ನು ಬಗೆಹರಿಸಲಾಗುವುದು, ಸಮಸ್ಯೆ ಪರಿಹರಿಸದಿದ್ದಲ್ಲಿ ತಾನು ರಾಜಕೀಯವಾಗಿ ನಿವೃತ್ತಿಯಾಗುವುದಾಗಿ ಜೆಡಿಎಸ್ ಮುಖಂಡ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದತ್ತ ಪೀಠದ ಸಮಸ್ಯೆ ಇನ್ನೂ ಜೀವಂತವಾಗಿರುವುದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳೇ ಕಾರಣ. ಎರಡೂ ಪಕ್ಷಗಳು ಮತಬ್ಯಾಂಕ್ ಗಾಗಿ ಈ ಸಮಸ್ಯೆಯನ್ನು ಜೀವಂತವಾಗಿಟ್ಟು ರಾಜಕಾರಣ ಮಾಡುತ್ತಿವೆ. ಈ ಬಾರಿಯ ದತ್ತಜಯಂತಿ ಸಂದರ್ಭ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ. ಶೋಭಾಯಾತ್ರೆ ವೇಳೆ ನೂರಾರು ಡಿಜೆ ಸೆಟ್ ಗಳಿಗೆ ಅನುಮತಿ ನೀಡಲಾಗಿದೆ. ಆಸ್ಪತ್ರೆ ಸಮೀಪ ಡಿಜೆ ಹಾಕಿ ರೋಗಿಗಳಿಗೆ ಕಿರುಕುಳ ನೀಡಲಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸರಕಾರ ಕೈಗೊಂಬೆಗಳಾಗಿ ಕೆಲಸಮಾಡುವ ಮೂಲಕ ಬಿಜೆಪಿ ಪಕ್ಷದ ಕಾರ್ಯಕರ್ತರಂತೆ ಕಾರ್ಯನಿರ್ವಹಿಸಿದ್ದಾರೆ ಎಂದು ಆರೋಪಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g