May 5, 2024

MALNAD TV

HEART OF COFFEE CITY

ಮೂಡಿಗೆರೆಯಲ್ಲಿ ಬಿಜೆಪಿ ಪಕ್ಷ ಉಳಿಸಿ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್ ನೀಡುವಂತೆ ಒತ್ತಾಯ

1 min read

ಮೂಡಿಗೆರೆ ಕ್ಷೇತ್ರದಿಂದ ಎಂ.ಪಿ.ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನೀಡಬಾರದು ಎಂದು ಒಂದು ಬಣ ಮುಂದಾಗಿದ್ದರೇ, ಮತ್ತೊಂದು ಬಣಎಂ.ಪಿ.ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ, ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿ ಉಳಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಮನವಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ನಗರದ ಸಿ.ಟಿ.ರವಿ ನಿವಾಸಕ್ಕೆ ಆಗಮಿಸಿದ ಎಂ.ಪಿ.ಕುಮಾರಸ್ವಾಮಿ ಬೆಂಬಲಿತ ಕಾರ್ಯಕರ್ತರು ಮೂಡಿಗೆರೆ ಕ್ಷೇತ್ರದಿಂದ ಎಂ.ಪಿ.ಕುಮಾರಸ್ವಾಮಿಯವರಿಗೆ ಪಕ್ಷ ಟಿಕೆಟ್ ನೀಡಬೇಕು ಮತ್ತು ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಉಳಿಸಬೇಕೆಂದು ಮನವಿ ಮಾಡಿದರು. ಎಂ.ಪಿ.ಕುಮಾರಸ್ವಾಮಿಯವರ ಪರ ವಿರೋಧದ ಬಣಗಳ ಮುಸುಕಿನ ಗುದ್ದಾಟ ಗುಟ್ಟಾಗಿರದೇ ಸಾರ್ವಜನಿಕವಾಗಿ ಬಹಿರಂಗವಾಗಿದ್ದು, ಪರ ವಿರೋಧದ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಟಿಕೆಟ್ ಸಂಬಂಧ ನಡೆಯುತ್ತಿರುವ ಈ ಗುದ್ದಾಟ ಬಿಜೆಪಿ ಮುಖಂಡರಿಗೆ ತಲೆನೋವಾಗಿದ್ದು, ಮುಂದಿನ ದಿನಗಳಲ್ಲಿ ಯಾವ ತೀರ್ಮಾನಕ್ಕೆ ಮುಖಂಡರು ಬರಲಿದ್ದಾರೆಂದು ಕಾದುನೋಡಬೇಕಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ನಾನೇನು ದೇವರಲ್ಲ, ಕೆಲವರು ವಿರೋಧ ಮಾಡುವವರು ಇರುತ್ತಾರೆ, ಭಿನ್ನಮತ ಸಹಜ, ನನಗೆ ಟಿಕೆಟ್ ಕೊಡಿ ಅಂತಾ ಪಕ್ಷದ ನಾಯಕರಿಗೆ ತಿಳಿಸಿದ್ದೇನೆ, ಟಿಕೆಟ್ ಗೆಲ್ಲುವವರಿಗೆ ಕೊಡಿ ಅಂತಾ ಹೇಳಿದ್ದೀನಿ ಎಂದರು. ಇನ್ನು ಶಾಸಕ ಸಿ.ಟಿ.ರವಿ ಮಾತಾನಾಡಿ ಕಾರ್ಯಕರ್ತರು ಪಕ್ಷದ ಶಕ್ತಿ, ಟಿಕೆಟದ ಯಾರಿಗೆ ನೀಡುತ್ತೆ ಅವರಿಗೆ ಬೆಂಬಲಿಸುವಂತೆ ಸೂಚಿಸಿದ್ದೇನೆ ಎಂದರು..

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!