May 11, 2024

MALNAD TV

HEART OF COFFEE CITY

ಇನಾಂ ದತ್ತಪೀಠದ ಶಾಖಾದ್ರಿಗೆ ಬಂಧನ ಭೀತಿ..!

1 min read

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಬುಡನ್ ಗಿರಿ ಶಾಖಾದ್ರಿ ಮನೆಯಲ್ಲಿ ಚಿರತೆ ಹಾಗೂ ಜಿಂಕೆ ಚರ್ಮ ಪತ್ತೆ ಪ್ರಕರಣ ಹಿನ್ನಲೆ ಶಾಖಾದ್ರಿ ಗೌಸ್ ಮೊಹಿದ್ದೀನ್ ಮೇಲೆ ಅರಣ್ಯಾಧಿಕಾರಿಗಳು ಕೇಸ್ ದಾಖಲು ಮಾಡಿದ್ದಾರೆ. ದತ್ತಪೀಠದ ಶಾಖಾದ್ರಿಯೂ ಹುಲಿ ಚರ್ಮದ ಮೇಲೆ ಕೂತಿರೋ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಗರದ ಮಾರ್ಕೆಟ್ ರಸ್ತೆಯಲ್ಲಿದ್ದ ಮನೆಯಲ್ಲಿ ಚಿರತೆ ಹಾಗೂ ಜಿಂಕೆ ಚರ್ಮ ಪತ್ತೆಮಾಡಿದ್ದಾರೆ. ಕಳೆದ ರಾತ್ರಿ ಚಿರತೆ ಹಾಗೂ ಜಿಂಕೆ ಎರಡು ಪ್ರಾಣಿಯ ಚರ್ಮವನ್ನ ವಶಕ್ಕೆ ಪಡೆದಿದ್ದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಚಿಕ್ಕಮಗಳೂರು ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ವೈಲ್ಡ್ ಲೈಫ್ ಆಕ್ಟ್ ನಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಅರಣ್ಯ ಅಧಿಕಾರಿಗಳು ಎರಡು ಪ್ರಾಣಿಯ ಚರ್ಮವನ್ನ ಎಫ್.ಎಸ್.ಎಲ್. ವರದಿಗೆ ಕಳುಹಿಸಲಿದ್ದು, ಸದ್ಯ ಚಿಕ್ಕಮಗಳೂರು ವಲಯದ ಅರಣ್ಯಾಧಿಕಾರಿ ಕಚೇರಿಯಲ್ಲಿ ಪ್ರಕರಣ ದಾಖಲುಮಾಡಲಾಗಿದೆ. ಆದರೆ ಇದೀಗ ಇನಾಂ ಶಾಖಾದ್ರಿಗೆ ಬಂಧನ ಭೀತಿ ಎದುರಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!