ಪಂಚಾಯತ್ ಕಾವಲು ಸಮಿತಿಯ ಜಿಲ್ಲಾ ಘಟಕ ಆರಂಭ ಜಿಲ್ಲಾಧ್ಯಕ್ಷರಾಗಿ ಗಂಗಾ ನಾಯಕ್ ಆಯ್ಕೆ
1 min readಚಿಕ್ಕಮಗಳೂರು : ಪಂಚಾಯತ್ ಕಾವಲು ಸಮಿತಿಯ ಜಿಲ್ಲಾ ಘಟಕವನ್ನು ಚಿಕ್ಕಮಗಳೂರಿನಲ್ಲಿ ಆರಂಭಿಸಲಾಗಿದೆ. ಜಿಲ್ಲಾ ಘಟಕಕ್ಕೆ ಗಂಗಾಧರ್ ನಾಯ್ಕ್ರವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಂಚಾಯತ್ ಕಾವಲು ಸಮಿತಿಯ ರಾಜ್ಯಾಧ್ಯಕ್ಷ ಬಿ.ಆರ್ ಯೋಗಿಶ್ ಹೇಳಿದ್ರು.
ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯ ನಂತರ ಮಾತನಾಡಿದ ಅವರು ಸರ್ಕಾರದ ಯೋಜನೆಗಳು ಜನರಿಗೆ ಸರಿಯಾಗಿ ತಲುಪುತ್ತಿಲ್ಲ, ಗ್ರಾಮೀಣ ಭಾಗದಲ್ಲಂತೂ ಸರ್ಕಾರದ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಈಗಾಗಲೇ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವುಂತೆ ಮಾಡಿದ್ದೇವೆ. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯಾಂಧ್ಯಂತ ಪಂಚಾಯತ್ ಕಾವಲು ಸಮಿತಿಯ ಘಟಕಗಳನ್ನು ತೆರೆದು ಬಲಿಷ್ಠ ಸಂಘಟನೆ ಕಟ್ಟುತ್ತೇವೆ ಎಂದು ಹೇಳಿದ್ರು.
ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾಧ್ಯಕ್ಷ ಗಂಗಾನಾಯ್ಕ ಜಿಲ್ಲೆಯಲ್ಲಿ ತಾಲೂಕು ಹಾಗೂ ಗ್ರಾಮೀಣಾ ಮಟ್ಟದಲ್ಲಿ ಉತ್ತಮ ಸಂಘಟನೆ ಕಟ್ಟಿ ನೊಂದವರಿಗೆ ನಿಷ್ಪಕ್ಷಪಾತವಾಗಿ ಸಹಾಯ ಮಾಡಲು ಕಂಕಣ ಬದ್ಧರಾಗಿದ್ದೇವೆ ಎಂದು ಹೇಳಿದ್ರು.
ಇದೇ ವೇಳೆ ಕಾರ್ಯದರ್ಶಿ ಶಿವಶಂಕರ್, ಗಂಗಾಧರ್, ರಾಜೇಶ್, ಮುಂತಾದವರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g