ಸೆಪ್ಟೆಂಬರ್ 11ರಂದು ನೂತನ ಬ್ರಾಹ್ಮಣ ಮಹಿಳಾ ವೇದಿಕೆ ಉದ್ಘಾಟನೆ
1 min read
ಇದೇ ಭಾನುವಾರ ಜಿಲ್ಲಾ ಬ್ರಾಹ್ಮಣ ಮಹಿಳಾ ವೇದಿಕೆ ನೂತನವಾಗಿ ಉದ್ಘಾಟನೆಗೊಳ್ಳಲಿದೆ ಎಂದು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಪಿ ಮಂಜುನಾಥ ಜೋಷಿ ಹೇಳಿದರು.
ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ರಂಗಣ್ಣ ಕಲ್ಯಾಣ ಮಂಟಪದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ವಿಪ್ರರ ಮಹಿಳಾ ಸಮಾವೇಶ ಸಹಾ ನಡೆಯಲಿದ್ದು ಬ್ರಾಹ್ಮಣ ಮಹಾಸಭಾ ಗಾಯತ್ರಿ ಮಹಿಳಾ ಮಂಡಳಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆಯ ಎಲ್ಲಾ 9 ತಾಲೂಕುಗಳಿಂದಲೂ ಸಾವಿರಾರು ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ಬ್ರಾಹ್ಮಣ ಮಹಿಳಾ ವೇದಿಕೆ ಜಿಲ್ಲಾ ಸಂಚಾಲಕಿ ಎಸ್ ಶಾಂತಕುಮಾರಿ ತಿಳಿಸಿದರು. ಸಮಾವೇಶದಲ್ಲಿ ಮಹಿಳೆಯರ ಸಮಸ್ಯೆ ಹಾಗೂ ಪ್ರಗತಿ ಕುರಿತು ವಿಚಾರಗೋಷ್ಠಿಗಳು ನಡೆಯಲಿವೆ, ಕಾರ್ಯಕ್ರಮದಲ್ಲಿ ಕರಕುಶಲ ವಸ್ತುಗಳ ಮತ್ತು ವಿಶೇಷ ಖಾದ್ಯಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಿದ್ದು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಉದ್ಘಾಟಿಸಲಿದ್ದು ಮುಖ್ಯ ಅತಿಥಿಯಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಅಶೋಕ ಹಾರನಹಳ್ಳಿ ಭಾಗವಹಿಸಲಿದ್ದಾರೆ. ಅಲ್ಲದೇ ಹಲವು ವಿಚಾರಗೋಷ್ಠಿಗಳು ಇದೇ ವೇಳೆ ನಡೆಯಲಿವೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g