May 17, 2024

MALNAD TV

HEART OF COFFEE CITY

ಮಲೆನಾಡಲ್ಲಿ ನಿಲ್ಲದ ಕಳ್ಳತನ, ರಾತ್ರಿ ಆಯ್ತು ಈಗ ಹಾಡಹಗಲೇ ಮನೆ ಕಳ್ಳತನ, ಆತಂಕದಲ್ಲಿ ಮಲೆನಾಡಿಗರು

1 min read

 

ಚಿಕ್ಕಮಗಳೂರು : ಮಲೆನಾಡಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳನ್ನ ಕಳ್ಳತನ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದ್ದು ಮಲೆನಾಡಿಗರು ಹಗಲಿರುಳು ಆತಂಕದಲ್ಲೇ ಬದುಕು ಸ್ಥಿತಿ ನಿರ್ಮಾಣವಾಗಿವೆ. ಮೂರು ದಿನದ ಹಿಂದಷ್ಟೆ ಜಿಲ್ಲೆ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173ರ ಬಣಕಲ್ ಮುಖ್ಯ ರಸ್ತೆಯಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳ ಬೀಗ ಒಡೆದು ಲಕ್ಷಾಂತರ ರೂಪಾಯಿ ಹಣ ಹಾಗೂ ವಸ್ತುಗಳನ್ನ ಕಳ್ಳತನ ಮಾಡಲಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ವೇದಾವತಿ ಎಂಬುವರ ಮನೆಯ ಹೆಂಚುಗಳನ್ನ ತೆಗೆದು ಕಳ್ಳತನ ಮಾಡಿದ್ದಾರೆ. 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಹಾಗೂ 25 ಸಾವಿರ ಹಣವನ್ನ ದೋಚಿದ್ದಾರೆ.

 

ಮನೆಯೊಡತೆ ವೇದಾವತಿ ಇಂದು ಬೆಳಗ್ಗೆ ತಮ್ಮ ಕಾಫಿತೋಟಕ್ಕೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೆ ಮನೆಗೆ ಬರುವಷ್ಟರಲ್ಲಿ ಮನೆ ಹೆಂಚು ತೆಗೆದು ಕಳ್ಳತನ ಮಾಡಿದ್ದಾರೆ. ವಿಷಯ ತಿಳಿದು ಮೂಡಿಗೆರೆ ಸರ್ಕಲ್ ಇನ್ಸ್‍ಪೆಕ್ಟರ್, ಗೋಣಿಬೀಡು ಪಿ.ಎಸ್.ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಣಿಬೀಡು ಠಾಣೆಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಆದರೆ, ಮೂಡಿಗೆರೆ ತಾಲೂಕಿನ ಅಕ್ಕಪಕ್ಕದ ಊರುಗಳಲ್ಲಿ ಹೀಗೆ ಮೇಲಿಂದ ಮೇಲೆ ಕಳ್ಳತನ ನಡೆಯುತ್ತಿದ್ದು ಹೊರಗಡೆಯವರು ಕಳ್ಳತನ ಮಾಡುತ್ತಿದ್ದಾರೋ ಅಥವ ಊರ ಒಳಗಿನವರೇ ಕಳ್ಳತನ ಮಾಡುತ್ತಿದ್ದಾರೋ ಅರ್ಥವಾಗದಂತಾಗಿದೆ. ಆದರೆ, ಮೂಡಿಗೆರೆ ಸುತ್ತಮುತ್ತಲಿನ ಜನ ಮಾತ್ರ ಆತಂಕದಿಂದ ಬದುಕುತ್ತಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!