ಸಾಮೀಲ್ ಹಾಗೂ ಟಿಂಬರ್ ವ್ಯಾಪಾರಿಗಳ ಮೇಲೆ ಹೆಚ್ಚಿಸಿರುವ ತೆರಿಗೆ ಅವೈಜ್ಞಾನಿಕ
1 min readಚಿಕ್ಕಮಗಳೂರು : ಚಿಕ್ಕಮಗಳೂರು ಕ್ಷೇತ್ರದ ಶಾಸಕರಾಗಿ ಚುನಾಯಿತರಾಗಿರುವ ಹೆಚ್.ಡಿ. ತಮ್ಮಯ್ಯರಿಗೆ ಸಾಮೀಲ್ ಮಾಲೀಕರು ಹಾಗೂ ಟಿಂಬರ್ ವ್ಯಾಪಾರಿಗಳ ಸಂಘದ ವತಿಯಿಂದ ಅಭಿನಂದನ ಪೂರ್ವಕ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಸನ್ಮಾನ ಸ್ವೀಕರಿಸಿ, ಸಾಮೀಲ್ ಮಾಲೀಕರ ಹಾಗೂ ಟಿಂಬರ್ ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿದ ನಂತರ ಮಾತನಾಡಿದ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಸಾಮೀಲ್ ಹಾಗೂ ಟಿಂಬರ್ ವ್ಯಾಪಾರಿಗಳು ಎಂದ ಕೂಡಲೇ ಎಲ್ಲರೂ ಶ್ರೀಮಂತರಲ್ಲ, ಅವರಲ್ಲೂ ಬಡವರಿದ್ದಾರೆ. 500-1000 ರೂಪಾಯಿಗಳಿದ್ದ ತೆರಿಗೆಯನ್ನು ಏಕಾಏಕಿ ಹತ್ತು ಸಾವಿರಕ್ಕೆ ಏರಿಸಿರುವುದು ಸರಿಯಲ್ಲ. ನಗರಸಭೆಯಿಂದ ಸಾಮೀಲ್ ಹಾಗೂ ಟಿಂಬರ್ ವ್ಯಾಪಾರಿಗಳ ಮೇಲೆ ಹೆಚ್ಚಿಸಿರುವ ತೆರಿಗೆ ಮಾನದಂಡವು ಸಂಪೂರ್ಣ ಅವೈಜ್ಞಾನಿಕವಾಗಿದೆ, ಇದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g