ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು, ನಾನೋಬ್ಬ ಅಕಾಂಕ್ಷಿ;ಮಾಜಿ ಸಚಿವ ಪ್ರಮೋದ್ ಮಧ್ವರಾಜ್
1 min readಚಿಕ್ಕಮಗಳೂರು ಜಿಲ್ಲಾ ಗಂಗಾಮತಸ್ಥರ ಸಂಘ ಮತ್ತು ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಎಮ್.ಬಿ.ಬಿ.ಎಸ್, ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಶ್ರೀ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು, ಭಾರತೀಯ ಜನತಾ ಪಕ್ಷದಿಂದ ನಾನೋಬ್ಬ ಅಕಾಂಕ್ಷಿ. ಅದಕ್ಕಾಗಿ ನಾನು ಪ್ರಯತ್ನ ಕೂಡ ಮಾಡಿತ್ತಿದ್ದೇನೆ. ಪಕ್ಷವು ನನಗೆ ಟಿಕೆಟ್ ನೀಡಿದರು, ನೀಡಲಿಲ್ಲದಿದ್ದರೂ ಪಕ್ಷಕ್ಕಾಗಿ ದುಡಿಯುತ್ತೇನೆ. ಯಾರಿಗೆ ಟಿಕೆಟ್ ನೀಡಬೇಕೆಂಬುದುದನ್ನು ಪಕ್ಷವು ನಿರ್ಧಾರ ಮಾಡುತ್ತದೆ. ಪಕ್ಷವು ಯಾವ ನಿರ್ಧಾರ ತೆಗೆದುಕೊಂಡರು ನಾನು ಬದ್ಧನಾಗಿರತ್ತೇನೆ. ನನ್ನ ಕೊನೆ ಉಸಿರಿರುವವರೆಗೂ ಪಕ್ಷಕ್ಕಾಗಿ ದುಡಿಯುತ್ತಿರುತ್ತೇನೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g