ಇಂದಿರಾನಗರದಲ್ಲಿ ಮನೆ ತೆರವುಗೊಳಿಸಿದ ನಗರಸಭೆ ಕ್ರಮ ಖಂಡಿಸಿ ಪ್ರತಿಭಟನೆ
1 min readಚಿಕ್ಕಮಗಳೂರು: ನಗರಸಭೆ ನಗರದ ಇಂದಿರಾನಗರದಲ್ಲಿ ತೆರವುಗೊಳಿಸಿದನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು ಮತ್ತು ಕಾರ್ಯಕರ್ತರು ನಗರಸಭೆ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಹಕ್ಕುಪತ್ರ ನೀಡಿ ಮನೆ ನಿರ್ಮಾಣ ಮಾಡಿಕೊಡುವಂತೆ ಒತ್ತಾಯಿಸಿದರು.
ನಗರಸಭೆ ಸಿಬ್ಬಂದಿಗಳು ಇದೇ ಪ್ರವೃತ್ತಿಯನ್ನು ಮುಂದೂವರೆಸಿದರೇ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ವಿಧಾನ ಪರಿಷತ್ ಮಾಜಿಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, 17ವರ್ಷಗಳಿಂದ ಚಿಕ್ಕಮಗಳೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಸಿ.ಟಿ.ರವಿ ವಸತಿ ರಹಿತರಿಗೆ ನಿವೇ ಶನ ಹಕ್ಕುಪತ್ರ ನೀಡಲು ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
ಮುತ್ತಯ್ಯ ಅವರು ನಗರಸಭೆ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ತಾತ್ಕಲಿಕ ನಿವೇಶನ ಹಕ್ಕು ಪತ್ರಕೊಟ್ಟಿದ್ದು, ಮನೆ ಕಟ್ಟಿಕೊಂಡಿದ್ದಾರೆ. ಅವುಗಳನ್ನು ಅಕ್ರಮ ಮನೆಗಳನ್ನು ತಿಳಿದು ನಗರ ಸಭೆಯವರು ತೆರವುಗೊಳಿಸಿದ್ದಾರೆ. ತಮ್ಮ ಪಕ್ಷದವರೆ ವಿರೋಧ ವ್ಯಕ್ತಪಡಿಸಿದರೂ ಗಮನಕ್ಕೆ ತೆಗೆದುಕೊಂಡಿಲ್ಲವೆಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ಉತ್ತರ ಪ್ರದೇಶದ ಬುಲ್ಡೋಜರ್ ಸಂಸ್ಕøತಿ ನಗರಕ್ಕೂ ಕಾಲಿಟಿದೆ. ನಗರಸಭೆ ಆಯುಕ್ತರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆಂದು ಆರೋಪಿಸಿದರು.
ಪ್ರತಿಭಟನೆ ಬಳಿಕ ಕಾಂಗ್ರೆಸ್ ಮುಖಂಡರು ನಗರಸಭೆ ಮುತ್ತಿಗೆಗೆ ಮುಂದಾದಾಗ ನಗರ ಸಭೆ ಗೇಟಿನಲ್ಲೇ ಪೊಲೀಸರು ಅವರನ್ನು ತಡೆದರು. ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಮನವಿ ಪತ್ರ ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಜಿಲ್ಲಾ ಪ್ರಧಾನಕಾರ್ಯದರ್ಶಿ ಶಿವಾನಂದಸ್ವಾಮಿ, ಮುಖಂಡರಾದ ಬಿ.ಎಚ್. ಹರೀಶ್, ನಯಾಜ್ ಅಹ್ಮದ್, ಪ್ರಸಾದ್ ಅಮೀನ್ ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g