ಧರ್ಮಸ್ಥಳ ಸಂಘದಿಂದ ಜನಸಾಮಾನ್ಯರಿಗಾಗಿ ಮಾಹಿತಿ
1 min readಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಕಾರ್ಲೆ ಗ್ರಾಮಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೌಲಭ್ಯಗಳ ಕುರಿತು ಮನವರಿಕೆ ಮಾಡಿದರು. ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಲೆ ಗ್ರಾಮ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. 26 ಕುಟುಂಬಗಳಿರೋ ಈ ಗ್ರಾಮದಲ್ಲಿ ಅಂದಾಜು 123 ಜನಸಂಖ್ಯೆ ಇದೆ. ಕೂಲಿ ಕಾರ್ಮಿಕರೇ ಹೆಚ್ಚಿರೋ ಕಾರ್ಲೆ ಗ್ರಾಮದಲ್ಲಿ ಹಲವು ದಶಕಗಳಿಂದ ಮೂಲಭೂತ ಸೌಲಭ್ಯಗಳಿಲ್ಲ. ಆದ್ದರಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಕಾರ್ಲೆ ಗ್ರಾಮದ ಮನೆಮನೆಗೆ ಭೇಟಿ ನೀಡಿ ತಮ್ಮ ಸಂಸ್ಥೆಯ ಯೋಜನೆಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸಂಘಗಳನ್ನ ರಚನೆ ಮಾಡಿಕೊಂಡು
ಈ ಭಾಗದ ಜನ ಸಂಘಟಿತರಾಗಿ ಆರ್ಥಿಕ ಚಟುವಟಿಕೆ ನಡೆಸಿ ಉಳಿತಾಯ ಮಾಡಿಕೊಂಡು ಜೀವನಕ್ಕೆ ಭದ್ರತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಬ್ಯಾಂಕಿಂಗ್ ವ್ಯವಹಾರದ ಮೂಲಕ ತಾವುಗಳು ಇರುವ ಭಾಗದಲ್ಲಿಯೇ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂಬುದು ಸಂಘದ ಆಶಯ ಎಂದು ಹಳ್ಳಿಗರಿಗೆ ಬದುಕಿನ ಬಗ್ಗೆ ಧೈರ್ಯ ತುಂಬಿದ್ದಾರೆ. ಇದೇ ವೇಳೆ, ಕಳಸ ಪ್ರಾಥಮಿಕ ಆರೋಗ್ಯದ ಕೇಂದ್ರದ ವೈದ್ಯಾಧಿಕಾರಿಗಳು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಕುರಿತು ಕುಗ್ರಾಮದ ಜನರಿಗೆ ಮಾಹಿತಿ ನೀಡಿದರು. ನಮ್ಮಲ್ಲಿ ಇರುವ ಪೌಷ್ಠಿಕ ಆಹಾರವನ್ನೇ ಬಳಸಿಕೊಂಡು ಡೆಂಗ್ಯೂ ಸೇರಿದಂತೆ ಇತರೆ ಕಾಯಿಲೆಗಳಿಂದ ದೂರವಿಡುವ ಕುರಿತು ಮಾಹಿತಿ ಕೊಡಿಸಿದ್ದಾರೆ. ಈ ಭಾಗದಲ್ಲಿ ಸಂಘಟನೆ ಹೆಚ್ಚಾದರೆ ರಸ್ತೆ ಸಂಪರ್ಕ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನ ಪಡೆದುಕೊಳ್ಳಬಹುದು. ಇದು ಸಂಘಟನೆಯ ಉದ್ದೇಶ ಎಂದು ಹಳ್ಳಿಗರಿಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿಮ್ಮ ನೆರವಿಗೆ ಬರಲಿದೆ. ಶೌರ್ಯ ರಾಷ್ಟ್ರೀಯ ವಿಪತ್ತು ಪಡೆ ಇದ್ದು ತುರ್ತು ಸಂದರ್ಭದಲ್ಲಿ ನಿಮಗೆ ಸಹಕಾರ ನೀಡುತ್ತೇವೆಂದು ಧೈರ್ಯ ತುಂಬಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g