ಹಕ್ಕುಪತ್ರಕ್ಕೆ ಒತ್ತಾಯ
1 min readಕಳಸ. ರೈತರ ಬದುಕಿಗಾಗಿ ಮಾಡಿರುವ ಕೃಷಿ ಜಮೀನಿನ ಕೆಲವು ರೈತರ ಮೇಲೆ ಕುದುರೆಮುಖ ವನ್ಯಜೀವಿ ವಲಯದ ಅಧಿಕಾರಿಗಳು ದಾಖಲಿಸಿರುವ ಸುಳ್ಳು ಪ್ರಕರಣಗಳನ್ನ ಕೂಡಲೇ ವಾಪಸ್ ಪಡೆಯಬೇಕೆಂದು ರೈತ ಸಂಘ ಆಗ್ರಹಿಸಿದೆ. ಕಳಸ ನಾಡಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಕುದುರೆಮುಖ ರೈತ ಸಂಘ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಸಂಸೆ ಗ್ರಾಮದ ಸರ್ವೇ ನಂಬರ್ 120, 138 ರಲ್ಲಿ ಸರ್ಕಾರ ಬಡ ರೈತರ ಪಹಣಿಯನ್ನು ತಾಂತ್ರಿಕ ಕಾರಣಗಳಿಂದ ರದ್ದು ಪಡಿಸಿರುವುದನ್ನು ಪುನರ್ ಪರಿಶೀಲಿಸಿ ಪಯಣಿಯನ್ನ ಪುನರ್ ಸ್ಥಾಪಿಸಬೇಕೆಂದು ಆಗ್ರಹಿಸಿದ್ದಾರೆ. ಕುದುರೆಮುಖ ವನ್ಯಜೀವಿ ವಲಯದ ಅಧಿಕಾರಿಗಳು ಸಂಸೆ ಗ್ರಾಮದ ಸರ್ವೇ ನಂ.138 ಮತ್ತು 183ರಲ್ಲಿ ಬಡ ರೈತರ ಮೇಲೆ ಭೂ ಕಬಳಿಕೆ ನ್ಯಾಯಾಲಯದಲ್ಲಿ ಅರಣ್ಯ ಇಲಾಖೆಯವರು ಸುಳ್ಳು ಪ್ರಕರಣಗಳನ್ನು ದಾಖಲಿಸಿರವುದನ್ನು ಈ ಕೂಡಲೇ ಹಿಂಪಡೆಯಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.200
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g