May 17, 2024

MALNAD TV

HEART OF COFFEE CITY

ನಾನು ದತ್ತಮಾಲೆ ಹಾಕಿದ್ದೇನೆ ಎಂಬುದು ಕೇವಲ ಊಹಾಪೋಹ: ಎಚ್ ಡಿ ತಮ್ಮಯ್ಯ

1 min read

ಚಿಕ್ಕಮಗಳೂರು: ನಾನು ದತ್ತಮಾಲೆ ಹಾಕಿದ್ದೇನೆ ಎಂಬುದು ಕೇವಲ ಊಹಾಪೋಹ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೆಲ ಮಾಧ್ಯಮಗಳಲ್ಲಿ ಪ್ರಸಾರವಾದ ಸುದ್ದಿ ಬಗ್ಗೆ ಪ್ರತಿಕ್ರಿಯೆ ನೀಡಿದ ಚಿಕ್ಕಮಗಳೂರು ಶಾಸಕ ಎಚ್ ಡಿ ತಮ್ಮಯ್ಯ ನಾನು ದತ್ತಮಾಲೆ ಧರಿಸಿದ್ದೇನೆ ಎಂಬುದು ಕೇವಲ ಊಹಾಪೋಹ ಸುಬ್ರಹ್ಮಣ್ಯ ಸ್ವಾಮಿ ಷಷ್ಠೀ ಹಿನ್ನೆಲೆಯಲ್ಲಿ ನಮ್ಮ ಕುಟುಂಬದವರ ಹರಕೆ ಹೊತ್ತಿದ್ದರು ಆದ್ದರಿಂದ ಕಳೆದ ಎರಡು ದಿನಗಳಿಂದ ವೃತದಲ್ಲಿದ್ದೆ, ಇದೇ ಸಂದರ್ಭದಲ್ಲಿ ಗೃಹ ಸಚಿವರು ದತ್ತಜಯಂತಿ ಸಿದ್ದತೆ ಪರಿಶೀಲನೆಗೆ ಐ.ಡಿ ಪೀಠಕ್ಕೆ ತೆರಳಿದ್ರು ಅವರು ಜೊತೆಯಲ್ಲಿ ದತ್ತಪೀಠಕ್ಕೆ ತೆರಳಿದ್ದೆ ಎಂದು ಎಚ್ ಡಿ ತಮ್ಮಯ್ಯ ಸ್ಪಷ್ಟಪಡಿಸಿದರು. ನಗರಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು ನಾನು ಧಾರ್ಮಿಕತೆಯಲ್ಲಿ ನಂಬಿಕೆ ಇಟ್ಟಿರುವವನು ಬಿಜೆಪಿ ಪಕ್ಷದಲ್ಲಿ ಇದ್ದಾಗ ಕಳೆದ 18 ವರ್ಷಗಳಿಂದ ದತ್ತಮಾಲೆ ಧರಿಸಿ ಹೋಗುತ್ತಿದ್ದೆ ಇದೀಗ ನಾನು ಜಾತ್ಯಾತೀತ ಪಕ್ಷವಾದ ಕಾಂಗ್ರೆಸ್ ನ ಶಾಸಕ ಎಂದು ಹೇಳಿದ ತಮ್ಮಯ್ಯ ನಿನ್ನೆ ದತ್ತಪೀಠಕ್ಕೆ ಹೋಗಿ ಬಂದಿದ್ದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!